ಕ್ವಾರಂಟೈನ್ ನಿಯಮ ಉಲ್ಲಂಘಿಸಬಾರದೆಂದು ಕರ್ನಾಟಕ-ಕೇರಳ ಗಡಿಯ ರಸ್ತೆಯಲ್ಲೇ ತಾಳಿ ಕಟ್ಟಿದ ವರ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿಯೇ ಇಂದು ಕೇರಳ ಮೂಲದ ಯುವಕ ಹಾಗೂ ಶಿವಮೊಗ್ಗ ಜಿಲ್ಲೆಯ ಯುವತಿ ವಿವಾಹವಾಗಿದ್ದಾರೆ.

ಚಾಮರಾಜನಗರ-ಕೇರಳ ಗಡಿಯ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಕರ್ನಾಟಕ ಗಡಿ ಮೂಲೆಹೊಳೆಯಲ್ಲಿ ಮಧ್ಯಾಹ್ನ ಕೇರಳ ಮೂಲದ ಯುವಕನೊಂದಿಗೆ ಶಿವಮೊಗ್ಗ ಮೂಲದ ಯುವತಿ ಪರಸ್ಪರ ಹಾರ ಬದಲಾಯಿಸಿ, ವರ ತಾಳಿ ಕಟ್ಟುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರೊನಾ ನಿಯಮ ಉಲ್ಲಂಘಿಸಬಾರದೆಂಬ ಉದ್ದೇಶದಿಂದ ದಂಪತಿ ಈ ನಿರ್ಧಾರ ಮಾಡಿದ್ದಾರೆ. ಅಲ್ಲದೆ ಅಂತರಾಜ್ಯ ಪ್ರಯಾಣ ಮಾಡಿದರೆ ಕ್ವಾರಂಟೈನ್ ಆಗಬೇಕು ಹೀಗಾಗಿ ಜೋಡಿ ಈ ಪ್ಲಾನ್ ಮಾಡಿದೆ.

ಕಳೆದ ತಿಂಗಳು ಕೊರೊನಾ ನಡುವೆ ಇಬ್ಬರಿಗೂ ನಿಶ್ಚಿತಾರ್ಥವಾಗಿತ್ತು. ಇದೀಗ ಮನೆಯವರ ಸಮ್ಮತಿಯೊಂದಿಗೆ ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ, ರಸ್ತೆಯಲ್ಲೇ ವಿವಾಹವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಂಧು ಮಿತ್ರರು ಹಾಗೂ ಗಡಿಯಲ್ಲಿದ್ದ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

Comments

Leave a Reply

Your email address will not be published. Required fields are marked *