ಗಾಂಧೀಜಿಯ ಆರ್ಥಿಕ ನೀತಿ ಅನುಸರಿಸಿದ್ರೆ ಆತ್ಮನಿರ್ಭರ ಭಾರತ್ ಅಭಿಯಾನ ಅಗತ್ಯವಿರಲಿಲ್ಲ- ಮೋದಿ

ನವದೆಹಲಿ: ಮಹಾತ್ಮ ಗಾಂಧಿಯವರ ಆರ್ಥಿಕ ತತ್ತ್ವಶಾಸ್ತ್ರವನ್ನು ಅನುಸರಿಸಿದ್ರೆ, ಇಂದು ಆತ್ಮನಿರ್ಭರ ಭಾರತ್ ಅಭಿಯಾನ ಅಗತ್ಯವಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

69ನೇ ಮನ್ ಕೀ ಬಾತ್‍ನನಲ್ಲಿ ಕೃಷಿ ಮಸೂದೆಯ ಬಗ್ಗೆ ಮಾತನಾಡಿ ರೈತರಿಗೆ ಮತ್ತೊಮ್ಮೆ ಅಭಯ ನೀಡಿದರು. ಮಹಾತ್ಮ ಗಾಂಧಿಯವರ ಆರ್ಥಿಕ ತತ್ತ್ವಶಾಸ್ತ್ರವನ್ನು ಅನುಸರಿಸಿದ್ದರೆ ಭಾರತ ಎಂದೋ ಸ್ವಾವಲಂಬಿಯಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.

ಆತ್ಮನಿರ್ಭರ ಭಾರತದ ನಿರ್ಮಾಣದಲ್ಲಿ ರೈತರ ಪಾತ್ರ ಪ್ರಮುಖ. ತಮ್ಮ ಉತ್ಪನ್ನಗಳನ್ನು ಮಂಡಿಗಳ ಹೊರಗೆ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ರೈತರಿಗೆ ಸರ್ಕಾರ ನೀಡಿದೆ ಎಂದು ಕೃಷಿ ಮಸೂದೆಯನ್ನು ಸಮರ್ಥಿಸಿಕೊಂಡರು.

ನೂತನ ಕೃಷಿ ವಿಧೇಯಕಗಳು ರೈತರ ಪರವಾಗಿದ್ದು, ಇವುಗಳ ಲಾಭವನ್ನು ದೇಶದ ರೈತ ಸಮುದಾಯ ಅರಿಯಬೇಕಿದೆ. ರೈತರು ತಮ್ಮ ಉತ್ಪನ್ನಗಳನ್ನು ತಮಗೆ ಇಷ್ಟಬಂದ ಜಾಗದಲ್ಲಿ, ಇಷ್ಟಬಂದ ಬೆಲೆಗೆ ಮಾರಾಟ ಮಾಡುವ ಸ್ವಾತಂತ್ರ್ಯ ಮತ್ತು ಶಕ್ತಿಯನ್ನು ಪಡೆದಿದ್ದಾರೆ ಎಂದು ಹೇಳಿದರು.

ಇತ್ತ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿದ್ದರೂ ಕೃಷಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.

Comments

Leave a Reply

Your email address will not be published. Required fields are marked *