ಗ್ರಾಮ ಸಮರದಲ್ಲಿ ಬಿಜೆಪಿ ಬೆಂಬಲಿತರು ಮೇಲುಗೈ

– ಹಳ್ಳಿ ಮಟ್ಟದಲ್ಲೂ ಆಪರೇಷನ್ ಕಮಲ?

ಬೆಂಗಳೂರು: ಹಳ್ಳಿ ಫೈಟ್‍ನಲ್ಲಿ ನಿರೀಕ್ಷೆಯಂತೆಯೇ ಆಡಳಿತಾರೂಢ ಬಿಜೆಪಿ ಬೆಂಬಲಿಗ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಸದ್ಯದ ಟ್ರೆಂಡ್ ಗಮನಿಸಿದರೆ ಅರ್ಧಕ್ಕಿಂತ ಹೆಚ್ಚು ಗ್ರಾಮಪಂಚಾಯ್ತಿಗಳಲ್ಲಿ ಅಧಿಕಾರಕ್ಕೆ ಏರುವುದು ಖಚಿತವಾಗಿದೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಕೂಡ ಹಲವೆಡೆ ಗೆದ್ದು ಬೀಗಿದ್ದಾರೆ. ಬ್ಯಾಲೆಟ್ ಪೇಪರ್ ಕಾರಣ ಮತ ಎಣಿಕೆ ಕಾರ್ಯದಲ್ಲಿ ವಿಳಂಬ ಆಗಿದ್ದು,  ಇನ್ನೂ ಬಹುತೇಕ ಕಡೆ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

ಪಕ್ಷದ ಸಾಧನೆ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಸಂತಸ ವ್ಯಕ್ತಪಡಿಸಿದ್ದಾರೆ. ಸಚಿವ ಅಶೋಕ್ ಎಲ್ಲಾ ಕಡೆ ಬಿಜೆಪಿ ಶಕ್ತಿ ಎದ್ದು ಕಾಣ್ತಿದೆ ಎಂದಿದ್ದಾರೆ. ಸಿದ್ದರಾಮಯ್ಯ ಮಾತ್ರ ಮತದಾರರ ವಿಶ್ವಾಸ ಗೆಲ್ಲಲಾಗದ ಬಿಜೆಪಿ ಹಲವೆಡೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಸೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಮತ ಎಣಿಕೆ ಕೇಂದ್ರಗಳ ಬಳಿ ಕೋವಿಡ್ ನಿಯಮಗಳ ಉಲ್ಲಂಘನೆ ರಾಜಾರೋಷವಾಗಿ ನಡೆಯಿತು. ನಂಜನಗೂಡು ಮತ ಎಣಿಕೆ ಕೇಂದ್ರದಲ್ಲಿ ಜನರನ್ನು ನಿಯಂತ್ರಿಸಲಾಗದೇ ಪೊಲೀಸರು ಪರದಾಡಿದರು. ಬಳ್ಳಾರಿಯ ಹೊಸಪೇಟೆಯಲ್ಲಿ ಮತ ಎಣಿಕೆ ಕೇಂದ್ರದ ಮುಂದೆ ಬ್ಯಾರಿಕೇಡ್ ದಾಟಿ ಬಂದಿದ್ದ ವ್ಯಕ್ತಿಗೆ ಹೊಸಪೇಟೆಯ ಡಿವೈಎಸ್‍ಪಿ ರಘುಕುಮಾರ್ ಕಪಾಳಮೋಕ್ಷ ಮಾಡಿದ್ದಾರೆ.

ಮಂಡ್ಯದ ಜಕ್ಕನಹಳ್ಳಿಯಲ್ಲಿ ಚುನಾಣೋತ್ತರ ಘರ್ಷಣೆ ಸಂಭವಿಸಿದೆ. ಮಾಜಿ ಸಚಿವ ಪುಟ್ಟರಾಜು ಬೆಂಬಲಿಗರು ಮತ್ತು ರೈತ ಸಂಘದ ಕಾರ್ಯಕರ್ತರು ದೊಣ್ಣೆ ಹಿಡಿದು ಬಡಿದಾಡಿಕೊಂಡಿದ್ದಾರೆ. ಘರ್ಷಣೆಯಲ್ಲಿ ಎರಡೂ ಕಡೆಯವರಗೂ ಗಾಯಗಳಾಗಿವೆ.

ಗ್ರಾಮ ಸಮರ ಫಲಿತಾಂಶ
* ಒಟ್ಟು ಗ್ರಾಮ ಪಂಚಾಯತ್‌ – 5,728
* ಒಟ್ಟು ಗ್ರಾ.ಪಂ ಸ್ಥಾನಗಳು – 82,616
* ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು – 13,107 ಗೆಲುವು
* ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು – 9,998 ಗೆಲುವು
* ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು – 4,458 ಗೆಲುವು
* ಇತರರು – 3,836

Comments

Leave a Reply

Your email address will not be published. Required fields are marked *