ಗ್ರೀನ್‍ಝೋನ್ ರಾಯಚೂರು ಜಿಲ್ಲೆಯಾದ್ಯಂತ ರಾತ್ರೋರಾತ್ರಿ ನಿಷೇಧಾಜ್ಞೆ ಜಾರಿ

ರಾಯಚೂರು: ಗ್ರೀನ್ ಝೋನ್ ನಲ್ಲಿದ್ದ ರಾಯಚೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರೋರಾತ್ರಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮೇ 31ರವರೆಗೆ ನಿಷೇಧಾಜ್ಞೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಸಂಜೆ 7 ರಿಂದ ಬೆಳಗ್ಗೆ 7ರವರೆಗೆ ಜನರು ಓಡಾಡದಂತೆ ಎಚ್ಚರಿಕೆ ನೀಡಲಾಗಿದೆ. ಂಮಹಾರಾಷ್ಟ್ರದ ಮುಂಬೈ ನಂಟಿನಿಂದ ರಾಯಚೂರಿನಲ್ಲಿ ಆತಂಕ ಸೃಷ್ಟಿಯಾಗಿದೆ. ಮುಂಬೈನಿಂದ ಬಂದ 6 ಮಂದಿಯಲ್ಲಿ ಕೊರೊನಾ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳಿಂದ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ಮುಂಬೈನಿಂದ ಬಂದ ಕೂಲಿ ಕಾರ್ಮಿಕರಲ್ಲಿ ಪಾಸಿಟಿವ್ ಶಂಕೆ ಇದ್ದು, ದೇವದುರ್ಗದಲ್ಲಿ ಇಬ್ಬರು, ರಾಯಚೂರು ನಗರದಲ್ಲಿ ನಾಲ್ಕು ಜನರಲ್ಲಿ ಸೋಂಕು ಇರುವ ಸಂಬಂಧ ಶಂಕೆ ವ್ಯಕ್ತವಾಗಿದೆ.

ಅಧಿಕಾರಿಗಳು ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡುತ್ತಿದ್ದಾರೆ. ಈ ಮೂಲಕ ಗ್ರೀನ್ ಝೋನ್ ಜಿಲ್ಲೆಯಲ್ಲಿ ಹಳದಿ ಝೋನ್ ವಾತಾವರಣ ನಿರ್ಮಾಣವಾಗಿದೆ. ಇದೂವರೆಗೆ ಜಿಲ್ಲೆಯಲ್ಲಿ 96 ಜನ ಆಸ್ಪತ್ರೆ ಐಸೋಲೆಷನ್ ನಲ್ಲಿದ್ದಾರೆ. 8,938 ಮಂದಿ ಸರ್ಕಾರಿ ಕ್ವಾರಂಟೈನ್ ನಲ್ಲಿದ್ದಾರೆ. ಇಲ್ಲಿಯವರೆಗೂ ಪ್ರಯೋಗಾಲಯಕ್ಕೆ ಕಳುಹಿಸಿದ್ದ 2,853 ಜನರ ವರದಿ ನೆಗೆಟಿವ್ ಬಂದಿದ್ದು, ಇನ್ನೂ 708 ಜನರ ವರದಿ ಬರಬೇಕಾಗಿದೆ.

Comments

Leave a Reply

Your email address will not be published. Required fields are marked *