ಚಿನ್ನಾಭರಣ ಸಮೇತ ಗ್ಯಾಸ್ ಸಿಲಿಂಡರ್ ಹೊತ್ತೊಯ್ದ ಕಳ್ಳರು

– 50 ಸಾವಿರ ನಗದು, ದುಬಾರಿ ಬಟ್ಟೆ ಕಳ್ಳತನ

ಜೈಪುರ: ಚಿನ್ನಾಭರಣ ಸಮೇತ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಕಳ್ಳರು ಹೊತ್ತೊಯ್ದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮನೆಯ ಮಾಲೀಕರು ವೈದ್ಯಕೀಯ ಚೆಕಪ್ ಗಾಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಕಳ್ಳತನ ನಡೆದಿದೆ.

ಅಜ್ಮೇರ್ ಜಿಲ್ಲೆಯ ಕ್ರಿಶ್ಚಿಯನ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚಶೀಲ ಬಿ ಬ್ಲಾಕ್ ನಲ್ಲಿರುವ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯ ಮಾಲೀಕ ದೀಪ್‍ಚಂದ್ ಗುಪ್ತಾ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದಾರೆ. ವೈದ್ಯಕೀಯ ತಪಾಸಣೆಗಾಗಿ ಗುಪ್ತಾ ಕುಟುಂಬದ ಜೊತೆ ಉದಯಪುರಕ್ಕೆ ತೆರಳಿದ್ದರು. ಮನೆಗೆ ಬಂದಾಗ ಹಾಕಿದ್ದ ಬೀಗ ಮುರಿಯಲಾಗಿತ್ತು. ಮನೆಯಲ್ಲಿದ್ದ 50 ಸಾವಿರ ನಗದು, ಚಿನ್ನಭರಣ ಹಾಗೂ ಗ್ಯಾಸ್ ಸಿಲಿಂಡರ್ ಕಳ್ಳತನವಾಗಿದೆ.

ಕಳ್ಳತನ ಸಂಬಂಧ ಗುಪ್ತಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 50 ಸಾವಿರ ನಗದು, ಚಿನ್ನದ ಮಂಗಲಸೂತ್ರ, ಕುಂಡಲ್, ಕಾಲ್ಗೆಜ್ಜೆ, ಕೆಲ ದುಬಾರಿ ಬೆಲೆಯ ಬಟ್ಟೆ ಮತ್ತು ಗ್ಯಾಸ್ ಸಿಲಿಂಡರ್ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Comments

Leave a Reply

Your email address will not be published. Required fields are marked *