ಚೀನಾ ವಿಚಾರದಲ್ಲಿ ಮೌನ, ಬಿಕ್ಕಟ್ಟಿನ ವೇಳೆ ಊಹಾಪೋಹಗಳಿಗೆ ಕಾರಣವಾಗಲಿದೆ: ರಾಗಾ

ನವದೆಹಲಿ: ಚೀನಾದೊಂದಿಗಿನ ಗಡಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮೌನವಾಗಿರುವುವುದು ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರೀ ಊಹಾಪೋಹಗಳು ಹಾಗೂ ಅನಿಶ್ಚಿತತೆಗೆ ಕಾರಣವಾಗಲಿದೆ ಎಂದು ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

ಭಾರತ ಚೀನಾ ಗಡಿಯಲ್ಲ ಉದ್ವಿಗ್ನತೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಟ್ವೀಟ್ ಮಾಡಿರುವ ಅವರು, ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗಳ ಬಗ್ಗೆ ಮೌನ ಮುರಿದು ವಾಸ್ತವದಲ್ಲಿ ಏನು ನಡೆಯುತ್ತಿದೆ ಎಂದು ಹೇಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.

ಕಳೆದ ಮೂರು ವಾರಗಳಿಂದ ಗಡಿಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಸೈನಿಕರು ಮುಖಾಮುಖಿಯಾಗಿದ್ದಾರೆ. ಚೀನಾ ಯುದ್ಧ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ವರದಿಯಾಗಿದೆ. ಈ ಹಿನ್ನಲೆ ದೇಶದ ಜನರಿಗೆ ಈ ಬಗ್ಗೆ ಸ್ಪಷ್ಟವಾಗಿ ತಿಳಿಸಬೇಕು ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

ಇದಕ್ಕೂ ಮೊದಲು ಅವರು ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿ, ಗಡಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಈ ಬಗ್ಗೆ ನಾನು ಮಾತನಾಡುವುದಿಲ್ಲ ಸರ್ಕಾರ ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗಳನ್ನು ಹೇಳಬೇಕು. ವಿಚಾರವನ್ನು ದೇಶದ ಮುಂದೆ ಪಾರದರ್ಶಕವಾಗಿಡಬೇಕು ಎಂದು ಅಭಿಪ್ರಾಯ ಪಟ್ಟಿದ್ದರು.

Comments

Leave a Reply

Your email address will not be published. Required fields are marked *