ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಚಿರತೆ ದಾಳಿ – ರೈತರಿಗೆ ಗಾಯ

ಯಾದಗಿರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಮೀನಾಸಪುರದಲ್ಲಿ ನಡೆದಿದೆ.

ಚಿರತೆ ದಾಳಿಯಿಂದ ಮೂವರು ರೈತರು ಗಾಯಗೊಂಡಿದ್ದು ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿರತೆ ದಾಳಿಗೆ ಒಳಗಾಗಿರುವವರು ಗ್ರಾಮದ ನಕ್ಕ ಚಂದ್ರಪ್ಪ ಮತ್ತು ಆತನ ಇಬ್ಬರೂ ಸ್ನೇಹಿತರು ಎಂದು ಹೇಳಲಾಗಿದೆ. ಚಿರತೆ ದಾಳಿಯಿಂದ ಮೂವರ ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೀನಾಸಪುರ ಗ್ರಾಮ ಮೀಸಲು ಅರಣ್ಯ ಪ್ರದೇಶದ ಪಕ್ಕದಲ್ಲಿಯೇ ಇರುವುದರಿಂದ, ಅರಣ್ಯ ಪ್ರದೇಶದಿಂದ ಚಿರತೆ ಬಂದಿರುವ ಅನುಮಾನ ವ್ಯಕ್ತವಾಗಿದೆ.

ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಿರತೆಯಿಂದ ಪ್ರಾಣಾಪಾಯ ಸಂಭವಿಸುವ ಮೊದಲೇ ಅದನ್ನು ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು, ಅರಣ್ಯ ಇಲಾಖೆ ಆಗ್ರಹಿಸಿದ್ದಾರೆ.

Comments

Leave a Reply

Your email address will not be published. Required fields are marked *