ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿ- ರೈತನಿಗೆ ಗಂಭೀರ ಗಾಯ

ಹಾವೇರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿ ಮಾಡಿದ್ದು, ರೈತ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ದುಂಡಶಿ ಗ್ರಾಮದ ಬಳಿ ನಡೆದಿದೆ.

ಗಾಯಗೊಂಡ ರೈತನನ್ನು ಮಹಾವೀರ ಧರ್ಮಪ್ಪ ದಿಪ್ಪಣ್ಣನವರ (55) ಎಂದು ಗುರುತಿಸಲಾಗಿದೆ. ರೈತನ ಮುಖ, ತಲೆ, ಮೈ ಮೇಲೆ ಮನಬಂದಂತೆ ಕಚ್ಚಿ ಕರಡಿ ಗಂಭೀರವಾಗಿ ಗಾಯಗೊಳಿಸಿದೆ. ಜಮೀನಿನಲ್ಲಿ ಕೆಲಸಕ್ಕೆ ಹೋದ ವೇಳೆ ದಾಳಿ ನಡೆಸಿ ಗಾಯಗೊಳಿಸಿದೆ.

ಕೂಡಲೇ ಗಾಯಾಳು ರೈತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೈತನ ಸ್ಥಿತಿ ಗಂಭೀರವಾಗಿದೆ.

Comments

Leave a Reply

Your email address will not be published. Required fields are marked *