ಜೀವನಕ್ಕೆ ಬೇಕಾದ ಸೌಲಭ್ಯ ಕೊಡಿ – ಕಪ್ಪುಪಟ್ಟಿ ಧರಿಸಿ ಬಂದ ಕೊರೊನಾ ವಾರಿಯರ್ಸ್

ಯಾದಗಿರಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಒಟ್ಟು 560 ನೌಕರರು ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಕೊರೊನಾ ಕ್ವಾರಂಟೈನ್ ಕೇಂದ್ರಗಳಲ್ಲಿ ಇವರ ಸೇವೆ ಅತ್ಯಗತ್ಯವಾಗಿದೆ.

ಹೀಗಿದ್ದರೂ ಈ ನೌಕರರ ಜೀವನಕ್ಕೆ ಬೇಕಾದ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವಿಫಲವಾಗಿದೆ. ಈ ನೌಕರರು ಕೊರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು, ಕೇಂದ್ರ ಸರ್ಕಾರದ ಆರೋಗ್ಯ ಸಿಬ್ಬಂದಿಗೆ ನೀಡಿರುವ ಯೋಜನೆಗಳು ಮತ್ತು ಸೌಲಭ್ಯಗಳು ಈ ವರ್ಗದ ನೌಕರರಿಗೆ ಅನ್ವಯವಾಗುವುದಿಲ್ಲ ಎಂಬುವುದು ಈ ನೌಕರರ ಆರೋಪವಾಗಿದೆ. ಹೀಗಾಗಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗಿದ್ದಾರೆ.

Comments

Leave a Reply

Your email address will not be published. Required fields are marked *