ಜುಲೈ 4ರಿಂದ ಹಾಸನದ ಹೋಂಸ್ಟೇ, ರೆಸಾರ್ಟ್ ಬಂದ್

-ಜಿಲ್ಲಾಧಿಕಾರಿಗಳ ಆದೇಶ

ಹಾಸನ: ಕೊರೊನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಾಸನ ಜಿಲ್ಲೆಯ, ಸಕಲೇಶಪುರ, ಆಲೂರು, ಬೇಲೂರು ತಾಲೂಕಿನ ಹೋಂ ಸ್ಟೇ ಮತ್ತು ರೆಸಾರ್ಟ್‍ಗಳನ್ನು ತೆರೆಯದಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ.

ರಾಜ್ಯದ ವಿವಿಧ ಕಡೆಯಿಂದ ರೆಸಾರ್ಟ್ ಮತ್ತು ಹೋಂ ಸ್ಟೇಗಳಿಗೆ ಪ್ರವಾಸಿಗರು ಬರುತ್ತಿದ್ದಾರೆ. ಅವರಲ್ಲಿ ಕೆಲವರು ಕುಡಿದು ನಡು ರಸ್ತೆಯಲ್ಲೇ ಕುಣಿಯುತ್ತಾರೆ. ಕೇಳಲು ಹೋದರೆ ಗಲಾಟೆ ಮಾಡುತ್ತಾರೆ. ಅವರಲ್ಲಿ ಯಾರಿಗಾದರೂ ಕೊರೊನಾ ಬಂದಿದ್ದರೆ ಅದು ಸ್ಥಳೀಯರಿಗೆ ಹರಡೋ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಕೂಡಲೇ ರೆಸಾರ್ಟ್ ಮತ್ತು ಹೋಂ ಸ್ಟೇಗಳನ್ನು ಬಂದ್ ಮಾಡಿಸಿ ಎಂದು ಸಕಲೇಶಪುರ ತಾಲೂಕಿನ ವಿವಿಧ ಗ್ರಾಮದ ಜನರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು.

In this photo illustration a coronavirus (COVID-19) blood sample is displayed

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಆರ್.ಗಿರೀಶ್, ಇದೇ ಜುಲೈ ನಾಲ್ಕರಿಂದ ಮುಂದಿನ ಆದೇಶದವರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಸಕಲೇಶಪುರ, ಆಲೂರು, ಬೇಲೂರು ತಾಲೂಕಿನ ಎಲ್ಲಾ ಹೋಂ ಸ್ಟೇ, ರೆಸಾರ್ಟ್ ಮುಚ್ಚಲು ಆದೇಶಿಸಿದ್ದಾರೆ.

Comments

Leave a Reply

Your email address will not be published. Required fields are marked *