ಟಿಪ್ಪರ್, ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ದುರ್ಮರಣ

-ಅಪಘಾತದ ರಭಸಕ್ಕೆ ಟಿಪ್ಪರ್ ಮುಂಭಾಗ ನಜ್ಜುಗುಜ್ಜು

ಮಡಿಕೇರಿ : ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ವಿರಾಜಪೇಟೆಯ ನಿವಾಸಿ ಭರತ್ ಮತ್ತು ಕುಶಾಲನಗರದ ನಿವಾಸಿ ಕುಟ್ಟನ್ ಅಪಘಾತದಲ್ಲಿ ಸಾವನ್ನಪ್ಪಿದವರು. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ರಾಮನಗರದಲ್ಲಿ ಟಿಪ್ಪರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಭರತ್ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರ ಕುಟ್ಟನ್ ಎಂಬವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ನೀಡುವ ಮೊದಲೇ ಕುಟ್ಟನ್ ಸಾವನ್ನಪ್ಪಿದ್ದಾರೆ.

ಮುಖಾಮುಖಿ ಡಿಕ್ಕಿಯ ರಭಸಕ್ಕೆ ಬೈಕ್ ಮುಂಭಾಗದ ಚಕ್ರವೇ ಮುರಿದು ಬಿದ್ದಿದ್ದರೆ, ಟಿಪ್ಪರ್ ನ ಮುಂಭಾಗ ನಜ್ಜುಗುಜ್ಜಾಗಿದೆ. ಘಟನೆ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *