ಡ್ರಗ್ಸ್‌ ತನಿಖೆ – ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್‌ ದಿಢೀರ್‌ ವರ್ಗಾವಣೆ

ಮಂಗಳೂರು: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್‌ ಶಿವಪ್ರಕಾಶ್ ನಾಯ್ಕ್ ದಿಢೀರ್‌ ವರ್ಗಾವಣೆ ಆಗಿದ್ದಾರೆ.

ಶಿವಪ್ರಕಾಶ್ ನಾಯ್ಕ್ ಅವರನ್ನು ವರ್ಗಾವಣೆ ಮಾಡಿದ್ದು ಅವರ ಜಾಗಕ್ಕೆ ಉಡುಪಿಯ ಕಾಪು ಠಾಣೆಯ ಸಿಐ ಆಗಿದ್ದ ಮಹೇಶ್ ಪ್ರಸಾದ್ ನೇಮಕವಾಗಿದ್ದಾರೆ. ಡ್ರಗ್ ಪೆಡ್ಲರ್ ಕಿಶೋರ್‌ನನ್ನು ಬಂಧಿಸಿದ್ದಕ್ಕೆ ಸಿಸಿಬಿ ಇನ್ಸ್‌ಪೆಕ್ಟರ್‌ ಅವರನ್ನು ವರ್ಗಾವಣೆ ಮಾಡಲಾಗಿದ್ಯಾ ಎಂಬ ಅನುಮಾನ ಎದ್ದಿದೆ.

ಕಿಶೋರ್ ಶೆಟ್ಟಿಯನ್ನು ಪ್ರಕರಣದಿಂದ ಕೈಬಿಡಲು ಶಿವಪ್ರಕಾಶ್‌ ಮೇಲೆ ಒತ್ತಡ ಬಂದಿತ್ತು.  ಕರಾವಳಿಯ ಪ್ರಭಾವಿ ಶಾಸಕರು  ಬಂಧಿಸದಂತೆ ಒತ್ತಡ ಹೇರಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು.

ರಾಜಕಾರಣಿಯ ಒತ್ತಡಕ್ಕೆ ಮಣಿಯದೇ ಕಿಶೋರ್‌ನನ್ನು ಶಿವಪ್ರಕಾಶ್ ನಾಯ್ಕ್ ಬಂಧಿಸಿದ್ದರು. ಈ ಕಾರಣಕ್ಕೆ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಮತು ಮಂಗಳೂರು ಪೊಲೀಸ್‌ ವಲಯದಿಂದ ಕೇಳಿ ಬರುತ್ತಿದೆ.

ನಿರೂಪಕಿ ಅನುಶ್ರೀ ಹೆಸರು ಹೇಳಿದ್ದ ಡ್ಯಾನ್ಸರ್ ಕಿಶೋರ್ ರಕ್ಷಣೆಗೆ ಭಾರೀ ಒತ್ತಡ ಹೇರಲಾಗುತ್ತಿದೆ ಎಂಬ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಗುರುವಾರ ಸಿಕ್ಕಿತ್ತು.

ಡ್ಯಾನ್ಸರ್ ಕಿಶೋರ್ ಅರೆಸ್ಟ್ ಆದ ದಿನವೇ ದೊಡ್ಡ ಲಾಬಿ ನಡೆದಿತ್ತು. ಪ್ರಕರಣದಿಂದ ಕಿಶೋರ್‌ನನ್ನು ಕೈ ಬಿಡುವಂತೆ ಕರಾವಳಿಯ ಶಾಸಕರೊಬ್ಬರು ಒತ್ತಡ ಹೇರುತ್ತಿದ್ದಾರೆ.

ಒತ್ತಡ ಯಾಕೆ?
ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯೊಬ್ಬರು ಆ ಶಾಸಕನಿಗೆ ಆಪ್ತರಾಗಿದ್ದಾರೆ. ಆ ಪ್ರತಿಷ್ಠಿತ ವ್ಯಕ್ತಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ರೂವಾರಿ. ಕಿಶೋರ್ ಕೂಡ ಆತನ ಅಣತಿಯಂತೆ ಬುಕ್ಕಿಗಳಿಗೆ ಡ್ರಗ್ಸ್ ಪಾರ್ಟಿ ಕೊಟ್ಟಿದ್ದ. ಆ ಪ್ರತಿಷ್ಠಿತ ವ್ಯಕ್ತಿ ರಾಜಕೀಯ ಒತ್ತಡ ತಂದು ಕಿಶೋರ್ ನನ್ನು ಪ್ರಕರಣದಿಂದ ಕೈ ಬಿಡುವ ಯೋಜನೆ ಹಾಕಿದ್ದ. ಆದರೆ ಆ ಯೋಜನೆಯನ್ನು ಸಿಸಿಬಿ ಪೊಲೀಸರು ಸಂಪೂರ್ಣ ಪ್ಲಾಪ್ ಮಾಡಿದ್ದಾರೆ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *