ತಂದೆಯೇ ಸುಪಾರಿ ಕೊಟ್ಟು ಮಗನನ್ನು ಕೊಲೆ ಮಾಡಿಸಿದ್ದಾರೆ: ತಾಯಿ ಆರೋಪ

– ತೆಂಗಿನಕಾಯಿ ಕೆಡವಿದ್ದೆ ತಪ್ಪಾಯ್ತಾ?

ಹಾಸನ: ಚನ್ನರಾಯಪಟ್ಟಣದ ಬೇಡಿಗನಹಳ್ಳಿ ಸಮೀಪ ನಡೆದ ಪುನೀತ್ ಕೊಲೆಯ ಹಿಂದೆ ತಂದೆ ಹಾಗೂ ಸೋದರನ ಕೈವಾಡ ಇದೆ ಎಂಬ ಶಂಕೆ ವ್ಯಕ್ತವಾಗಿದೆ. ಪುನೀತನ ತಾಯಿ ಯಶೋಧಮ್ಮ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಂದೆ ಹೇಮಂತ್ ಮತ್ತು ಪುನೀತ್ ನಡುವೆ ಕೆಲ ವರ್ಷಗಳಿಂದ ಆಸ್ತಿ ಹಂಚಿಕೆ ವಿಚಾರವಾಗಿ ವೈಷಮ್ಯ ಇತ್ತು. ಈ ಕಾರಣದಿಂದ ಪತಿ ಹಾಗೂ ಇನ್ನೊಬ್ಬ ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ತಮ್ಮ ದೂರಿನಲ್ಲಿ ತಾಯಿ ಯಶೋಧಮ್ಮ ಮನವಿ ಮಾಡಿದ್ದಾರೆ.

ಮೂರು ವರ್ಷಗಳಿಂದ ತಂದೆ ಮತ್ತು ಪುನೀತ್ ಬೇರೆಯಾಗಿದ್ದರು. ಪುನೀತನೊಂದಿಗೆ ತಾಯಿ ಯಶೋಧಮ್ಮ ವಾಸವಾಗಿದ್ದರು ಈ ನಡುವೆ ತೋಟದಲ್ಲಿ ತೆಂಗಿನಕಾಯಿ ಕೆಡವಿದ್ದರಿಂದ ತಂದೆ ಹೇಮಂತ್ ತಮ್ಮ ಹಿರಿಯ ಮಗ ಪುನೀತ್‍ಗೆ ವಾರ್ನಿಂಗ್ ಮಾಡಿದ್ದರು. ಈ ಕಾರಣದಿಂದಲೇ ಕೊಲೆ ಮಾಡಲಾಗಿದೆ ಎಂದು ಯಶೋಧಮ್ಮ ದೂರು ನೀಡಿದ್ದು, ತಂದೆಯಿಂದಲೇ ಮಗನ ಹತ್ಯೆ ಆಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಶಂಕಿತ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Comments

Leave a Reply

Your email address will not be published. Required fields are marked *