ತಿರುಪತಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

ಹೈದರಾಬಾದ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಿರುಪತಿಗೆ ಭೇಟಿ ನೀಡಿದ್ದಾರೆ.

ನಟ ಇಂದು ಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ. ಈ ವೇಳೆ ದಾಸನಿಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್, ಸಿನಿಮಾ ತೆಲುಗು ವಿತರಕ ಕೂಡ ಸಾಥ್ ನೀಡಿದ್ದಾರೆ.

ನಮ್ಮ ಮನೆ ದೇವರು, ಹೀಗಾಗಿ ದರ್ಶನಕ್ಕೆ ಬಂದಿದ್ದೇನೆ. ಇಲ್ಲಿಗೆ ಬರದೆ 5 ವರ್ಷ ಆಗಿತ್ತು, ಈಗ ಸಮಯ ಕೂಡಿ ಬಂತು. ರಾಬರ್ಟ್ ಸಿನಿಮಾ ಬಿಡುಗಡೆಯಾಗಲಿ. ಆಮೇಲೆ ಮಾತನಾಡ್ತೀನಿ ಎಂದರು.

ತಮ್ಮ ಬಹು ನಿರೀಕ್ಷಿತ ಸಿನಿಮಾ ರಾಬರ್ಟ್ ಪ್ರಚಾರದಲ್ಲಿ ಬ್ಯುಸಿಯಾಗಿದ್ದು, ಕನ್ನಡ ಹಾಗೂ ತೆಲುಗಿನಲ್ಲಿ ಒಂದೇ ದಿನ ತೆರೆ ಕಾಣಲಿದೆ. ತೆಲುಗು ಸಿನಿಮಾದ ಪ್ರಚಾರಕ್ಕಾಗಿ ಹೈದರಾಬಾದಿಗೆ ತೆರಳಲಿರುವ ದರ್ಶನ್, ಅದಕ್ಕೂ ಮೊದಲು ತಿರುಪತಿಗೆ ಭೇಟಿ ಕೊಟ್ಟಿದ್ದು, ತಿಮ್ಮನ ದರ್ಶನ ಪಡೆದು ಆಶೀರ್ವಾದ ಪಡೆದಿದ್ದಾರೆ.

ಮಾರ್ಚ್ 11ರಂದು ಕನ್ನಡ ಹಾಗೂ ತೆಲುಗಿನಲ್ಲಿ ರಾಬರ್ಟ್ ತೆರೆ ಕಾಣಲಿದೆ. ಈ ಮಧ್ಯೆ ತೆಲುಗು ಇಂಡಸ್ಟ್ರಿಯಲ್ಲಿ ರಾಬರ್ಟ್ ಸಿನಿಮಾ ಬಿಡುಗಡೆಗೆ ಅಡ್ಡಿಪಡಿಸಲಾಗಿದೆ. ಇದರಿಂದ ನೊಂದಿದ್ದ ದಾಸ, ಫಿಲಂ ಚೇಂಬರ್ ಗೆ ದೂರು ನೀಡಿದ್ದರು.

Comments

Leave a Reply

Your email address will not be published. Required fields are marked *