ತುಮಕೂರು, ಎರಡು ಪ್ರತ್ಯೇಕ ಅಪಘಾತ – ನಾಲ್ವರ ಸಾವು

ತುಮಕೂರು: ಬೆಳ್ಳಂಬೆಳಗ್ಗೆ ಎರಡು ಪ್ರತ್ಯೆಕವಾಗಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ಬೆಂಗಳೂರುಕಡೆ ತೆರಳುತ್ತಿದ್ದ ಬೈಕ್‍ಗೆ ಲಾರಿ ಡಿಕ್ಕಿಯಾಗಿದೆ. ಬೈಕ್ ಸ್ಥಳದಲ್ಲೆ ಹೊತ್ತಿ ಉರಿದು, ಸವಾರರಾದ ರಾಮಚಂದ್ರ(30), ಪ್ರಿಯ(25) ಮೃತರಾಗಿದ್ದಾರೆ. ಮೃತರು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಮೂಲದವರಾಗಿದ್ದು, ಬೆಂಗಳೂರಿನ ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರತ್ಯೇಕ ಅಪಘಾತ ತುಮಕೂರು ಜಿಲ್ಲೆಯ ಶಿರಾ ನಗರದ ಪ್ರೆಸಿಡೆನ್ಸಿ ಶಾಲೆ ಬಳಿ ರಾತ್ರಿ ಭೀಕರ ಅಪಘಾತ ನಡೆದಿದೆ. ಈ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೈಕ್ ಮತ್ತ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತರಾಗಿದ್ದಾರೆ. ಈ ಇಬ್ಬರು ಹೊರರಾಜ್ಯದಿಂದ ಕೆಲಸ ಅರಸಿ ನಗರಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಇಬ್ಬರು ಬೈಕ್ ಸವಾರರ ಗುರುತು ಪತ್ತೆಯಾಗಿಲ್ಲ. ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *