ದಕ್ಷಿಣ ಕನ್ನಡದ ಸುಳ್ಯದಲ್ಲಿ ಕೊರೊನಾಗೆ ವೃದ್ಧೆ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಕೊರೊನಾಗೆ ವೃದ್ಧೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಸುಳ್ಯ ತಾಲೂಕಿನ ಕೆರೆಮೂಲೆ ನಿವಾಸಿ ವೃದ್ಧೆ ವಾರದ ಹಿಂದೆ ಅಸೌಖ್ಯದ ಹಿನ್ನೆಲೆ ಸುಳ್ಯದ ಆಸ್ಪತ್ರೆ ದಾಖಲಾಗಿದ್ದರು. ಆ ಬಳಿಕ ಎರಡು ದಿನಗಳ ಹಿಂದಷ್ಟೇ ಮಂಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತಪಟ್ಟ ಬಳಿಕ ನಡೆಸಿದ ಪರೀಕ್ಷೆಯಲ್ಲಿ ವೃದ್ಧೆಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.

ಇತ್ತ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯಾಗುವ ಸಾಧ್ಯತೆ ಇದ್ದು, ಮಂಗಳೂರು ಸೇರಿದಂತೆ ಜಿಲ್ಲಾದ್ಯಂತ ಮೋಡಕವಿದ ವಾತಾವರಣವಿದೆ. ರಾತ್ರಿ ಹಲವೆಡೆ ಭಾರೀ ಮಳೆ ಸುರಿದಿದೆ. 48 ಗಂಟೆಗಳ ಕಾಲ ಭಾರೀ ಮಳೆಯಾಗಿವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಇಂದು ಮತ್ತೆ ನಾಳೆ ಆರೆಂಜ್ ಅಲರ್ಟ್ ಘೋಷಿಸಿದೆ.

Comments

Leave a Reply

Your email address will not be published. Required fields are marked *