ದಲಿತ ಯುವಕನಿಗೆ ಥಳಿಸಿದ್ದ ಆಂಧ್ರದ ನಟ ಉಡುಪಿಯಲ್ಲಿ ಅರೆಸ್ಟ್

ಉಡುಪಿ: ಆಂಧ್ರಪ್ರದೇಶದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ದಲಿತ ಯುವಕನ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ತೆಲುಗು ಚಿತ್ರ ನಿರ್ಮಾಪಕ, ತೆಲುಗು ಬಿಗ್‍ಬಾಸ್ ಸ್ಪರ್ಧಿ ಆರೋಪಿ ನೂತನ್ ನಾಯ್ಡುನನ್ನು ಉಡುಪಿ ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ, ವಿಶಾಖಪಟ್ಟಣ ಪೊಲೀಸರಿಂದ ಶನಿವಾರ ಬೆಳಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಪೊಲೀಸರು ಆರೋಪಿಯನ್ನು ರೈಲ್ಲೇ ನಿಲ್ದಾಣದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮಂಗಳೂರಿನಿಂದ ಮುಂಬೈಗೆ ಪರಾರಿಯಾಗಲು ಯತ್ನಿಸಿದ್ದ ಎನ್ನಲಾಗಿದೆ.

ಉಡುಪಿ ಮತ್ತು ಮಣಿಪಾಲ ಠಾಣೆ ಪಿಎಸ್‍ಐ ನೇತೃತ್ವದ ತಂಡ ಆರೋಪಿಯನ್ನು ಸುತ್ತುವರಿದಾಗ ತನ್ನ ಬಳಿಯಿದ್ದ ಒಂದು ಮೊಬೈಲ್ ಅನ್ನು ಎಸೆಯಲು ಮುಂದಾಗಿದ್ದಾನೆ. ಆರೋಪಿ ನೂತನ್ ಬಳಿಯಿಂದ ನಾಲ್ಕು ಮೊಬೈಲ್ ಫೋನ್‍ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಒಂದು ಗಂಟೆ ಬಳಿಕ ಆರೋಪಿ ನೂತನ್‍ನ್ನು ವಿಶಾಖಪಟ್ಟಣ ಪೊಲೀಸರು ವಶಕ್ಕೆ ಪಡೆದುಕೊಂಡರು. ವಿಶಾಖಪಟ್ಟಣ ಪೊಲೀಸರು ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಶಾಖಪಟ್ಟಣಕ್ಕೆ ಕರೆದೊಯ್ದಿದ್ದಾರೆ.

Comments

Leave a Reply

Your email address will not be published. Required fields are marked *