ದೆಹಲಿಯಲ್ಲಿ ದಿ.ಸುರೇಶ್ ಅಂಗಡಿ ಮೂರ್ತಿ ಪ್ರತಿಷ್ಠಾಪನೆ – ಕುಟುಂಬಸ್ಥರಿಂದ ನಮನ

ನವದೆಹಲಿ: ಕೊರೊನಾದಿಂದ ಮೃತಪಟ್ಟ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಮೂರ್ತಿಯನ್ನು ದೆಹಲಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ.

ದೆಹಲಿಯಲ್ಲಿರುವ ವೀರಶೈವ ರುದ್ರಭೂಮಿ ಬಳಿ ದಿ.ಸುರೇಶ್ ಅಂಗಡಿ ಕುಟುಂಬಸ್ಥರಿಂದ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಸಂಸದೆ ಮಂಗಳಾ ಅಂಗಡಿ ಪತಿಯ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ.

ಸಂಸದರಾದ ಡಿ.ವಿ.ಸದಾನಂದಗೌಡ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ಸೇರಿದಂತೆ ರಾಜ್ಯದ ಸಂಸದರು ಈ ವೇಳೆ ಭಾಗಿಯಾಗಿದ್ದರು. ಇದನ್ನೂ ಓದಿ: ಒಬ್ಬಳೇ ಮಹಿಳಾ ಅಥ್ಲೀಟ್, ಪುರುಷರೊಂದಿಗೆ ಕ್ರೀಡಾಕೂಟಕ್ಕೆ ಕಳಿಸಲ್ಲ

ಇಂದು ನವದೆಹಲಿಯಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಶ್ರೀ ಸುರೇಶ್ ಅಂಗಡಿ ಅವರ ಸಮಾಧಿ ಸ್ಥಳದಲ್ಲಿ ಶ್ರೀ ಸುರೇಶ್ ಅಂಗಡಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಳೀನ್ ಕುಮಾರ್ ಕಟೀಲ್, ಸಂಸದರು ಹಾಗೂ ಶ್ರೀ ಸುರೇಶ್ ಅಂಗಡಿ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು ಎಂದು ಸಂಸದರಾದ ಡಿ.ವಿ.ಸದಾನಂದಗೌಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಹಿತಿ ಹಂಚಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *