ದೇವರಗುಡ್ಡದ ಐತಿಹಾಸಿಕ ದೇವಾಯಲದಲ್ಲಿ ದರ್ಶನ ಭಾಗ್ಯ ಬಂದ್

ಹಾವೇರಿ: ರಾಜ್ಯ ಸರ್ಕಾರದ ಆದೇಶ ಹಾಗೂ ಕೆಲವು ಸೂಚನೆಗಳನ್ನ ಪಾಲನೆ ಮಾಡುತ್ತಾ ರಾಜ್ಯದ ಬಹುತೇಕ ದೇವಾಲಯ ಓಪನ್ ಆಗಿದ್ದು, ಭಕ್ತರಿಗೆ ದೇವರ ದರ್ಶನ ಸಿಗುತ್ತಿದೆ.

ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕು ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದಲ್ಲಿ ಅನಿರ್ಧಿಷ್ಟಾವಧಿವರೆಗೆ ದೇವರ ದರ್ಶನ ಇಲ್ಲ ಎಂದು ಗ್ರಾಮಸ್ಥರು ಹಾಗೂ ದೇವಸ್ಥಾನ ಪ್ರಧಾನ ಅರ್ಚಕರು ನಿರ್ಧಾರ ಮಾಡಿದ್ದಾರೆ. ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರು ಸಭೆ ಸೇರಿ ಈ ನಿರ್ಧಾರ ಮಾಡಿದ್ದಾರೆ.

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗಿ ಎಲ್ಲೆಡೆ ವ್ಯಾಪಿಸ್ತಿರೋದ್ರಿಂದ ದೇವಸ್ಥಾನ ತೆರೆಯದಿರಲು ನಿರ್ಧಾರ ಮಾಡಿದ್ದಾರೆ. ಪ್ರಸಿದ್ಧ ಮಾಲತೇಶ ದೇವಸ್ಥಾನಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಭಕ್ತರು ದೇವರ ದರ್ಶನಕ್ಕೆ ಬರೋದ್ರಿಂದ ದೇವಸ್ಥಾನ ಸಮಿತಿ, ಅರ್ಚಕರು ಹಾಗೂ ಗ್ರಾಮಸ್ಥರ ಹಿತದೃಷ್ಟಿಯಿಂದ ದೇವರ ದರ್ಶನಕ್ಕೆ ನಿಷೇಧ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *