ದ.ಕ.ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಅಪಘಾತ- ಪ್ರಾಣಾಪಾಯದಿಂದ ಪಾರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಅವರ ಕಾರು ಮೂಡಬಿದ್ರೆಯ ಮಿಜಾರು ಸಮೀಪ ಅಪಘಾತಕ್ಕೀಡಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡು ಜಿಲ್ಲಾಧ್ಯಕ್ಷರು ಹಾಗೂ ಕಾರು ಚಾಲಕ ಅದೃಷ್ಟವಶಾತ್ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಅವರು ಮೂಡಬಿದ್ರೆಯಿಂದ ಮಂಗಳೂರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ಕಾರು ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಂಪೌಂಡ್ ಗೋಡೆಗೆ ಹೊಡೆದಿದೆ.

ಘಟನೆಯಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸುದರ್ಶನ್ ಮೂಡಬಿದ್ರೆ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆಯಲ್ಲಿ ಜಿಲ್ಲಾಧ್ಯಕ್ಷರ ಕಾರು ಸಂಪೂರ್ಣ ಜಖಂ ಆಗಿದೆ.

Comments

Leave a Reply

Your email address will not be published. Required fields are marked *