ನಟ ಸಂಚಾರಿ ವಿಜಯ್ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರು ಇಂದು ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ

ಭಗವಂತನು ಮೃತರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.  ಇದನ್ನೂ ಓದಿ: ಲಾಕ್‍ಡೌನ್ ಮೊದಲು ಮಾತನಾಡಿದ್ದೆ, ಈಗ ಆಘಾತಗೊಂಡಿದ್ದೇನೆ: ಸುದೀಪ್

Comments

Leave a Reply

Your email address will not be published. Required fields are marked *