ನಡು ರಸ್ತೆಯಲ್ಲಿ ಸಚಿವ ಡಾ. ಸುಧಾಕರ್ ಸಿಬ್ಬಂದಿ ನಡುವೆ ಮಾರಾಮಾರಿ

ಬೆಂಗಳೂರು: ಸಚಿವ ಡಾ. ಕೆ ಸುಧಾಕರ್ ನಿವಾಸದ ಮುಂದೆ ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಸಚಿವ ಸುಧಾಕರ್ ಮನೆಯ ಮುಂದೆ, ಗನ್‍ಮ್ಯಾನ್ ತಿಮ್ಮಯ್ಯ ಹಾಗೂ ಡ್ರೈವರ್ ಸೋಮಶೇಖರ್ ನಡು ಬೀದಿಯಲ್ಲಿ ಉರುಳಾಡಿಕೊಂಡು ಅಂಗಿ ಕಿತ್ತು ಹೋಗುವಂತೆ ಒಬ್ಬರಿಗೊಬ್ಬರು ಕಿತ್ತಾಡಿಕೊಂಡಿದ್ದಾರೆ.

ಘಟನೆ ಕುರಿತಂತೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ ಡ್ರೈವರ್ ಸೋಮಶೇಖರ್, ನಿನ್ನೆ ಟೀ ಮಾರುವ ಅಂಗವಿಕಲನ ಮೇಲೆ ತಿಮ್ಮಯ್ಯ ಹಲ್ಲೆ ನಡೆಸಿದ್ದಾನೆ. ಹೀಗಾಗಿ ನಾವು ಎಲ್ಲರೂ ಆತನ ವಿರುದ್ಧ ಬೇಸರ ವ್ಯಕ್ತಪಡಿಸಿದೆವು. ಅಲ್ಲದೆ ಈ ವಿಚಾರವನ್ನು ಎಲ್ಲೂ ಕೂಡ ನಾವು ಬಹಿರಂಗ ಪಡಿಸಿಲ್ಲ. ಆದರೂ ತಿಮ್ಮಯ್ಯ ಸಚಿವರಿಗೆ ಹಾಗೂ ಮೇಡಂಗೆ ಹೇಳಿದ್ದೇನೆ ಎಂದು ಭಾವಿಸಿ ಭಯದಿಂದ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ.

ನಿನ್ನೆ ಆ ಅಂಗವಿಕಲ, ಸಚಿವರಿಗೆ ತಿಳಿಸುವುದಾಗಿ ಮೂರು ಬಾರಿ ಬಂದಿದ್ದಾನೆ. ಆದರೆ ನಾನು ಹಾಗೂ ಪೊಲೀಸರು ಬೇಡಪ್ಪ ಹೋಗು ಎಂದು ತಿಳಿ ಹೇಳಿ ಕಳುಹಿಸಿದ್ದೇವೆ. ತಪ್ಪು ಮಾಡಿಲ್ಲ ಎಂದರೆ ಏಕೆ ಭಯ ಪಡಬೇಕು ಎಂದು ಪ್ರಶ್ನಿಸುತ್ತಾ, ಅನುಮಾನಗೊಂಡು ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಸೋಮಶೇಖರ್, ತಿಮ್ಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಇದೇ ರೀತಿ ಗಲಾಟೆ ಮಾಡಿದ್ದನೆಂದು ಡಿಕೆ ಶಿವಕುಮಾರ್ ಮನೆಯ ಟ್ಯಾಕ್ಸಿ ಡ್ರೈವರ್ ಎಲ್ಲರೂ ಸೇರಿ ತಿಮ್ಮಯ್ಯನಿಗೆ ಹೊಡೆದಿದ್ದರು ಎಂದು ತಿಳಿಸಿದ್ದಾರೆ. ಸದ್ಯ ಘಟನೆಯಲ್ಲಿ ಡ್ರೈವರ್ ಸೋಮಶೇಖರ್ ಮೊಣಕೈಗೆ ಹಾನಿಯಾಗಿದೆ.

Comments

Leave a Reply

Your email address will not be published. Required fields are marked *