ನದಿಯಲ್ಲಿ ತೇಲಿ ಬಂತು ದೊಡ್ಡ ಗಾತ್ರದ ಮೀನು- ಸ್ಥಳೀಯರಲ್ಲಿ ಆಶ್ಚರ್ಯ

ಬೆಳಗಾವಿ/ಚಿಕ್ಕೋಡಿ: ನದಿ ನೀರಿನಲ್ಲಿ ದೊಡ್ಡ ಗಾತ್ರದ ಮೀನು ತೇಲಿ ಬಂದಿದ್ದು, ಇದನ್ನು ಕಂಡ ಗ್ರಾಮಸ್ಥರು ಕಂಗಾಲಾಗಿದ್ದಾರೆ.

ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸಾಪೂರ ಬಳಿ ಮಾರ್ಕಂಡಯ್ಯ ನದಿ ಪ್ರವಾಹದಲ್ಲಿ ಈ ಬೃಹತ್ ಗಾತ್ರದ ಮೀನು ಕಂಡುಬಂದಿದ್ದು, ಸ್ಥಳೀಯರು ಮೊಬೈಲ್ ನಲ್ಲಿ ಮೀನಿನ ವಿಡಿಯೋ ಸೆರೆ ಹಿಡಿದಿದ್ದಾರೆ. ಮೀನು ನೋಡಿದ ಸ್ಥಳೀಯರು ಆಶ್ಚರ್ಯಗೊಂಡಿದ್ದಾರೆ. ಬೆಳಗಾವಿ ಇತಿಹಾಸದಲ್ಲಿಯೇ ಅತೀ ದೊಡ್ಡ ಮೀನು ಪ್ರತ್ಯಕ್ಷವಾಗಿದೆ ಎಂದು ಉದ್ಗಾರ ಹಾಕಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ.

ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ರಾಯಬಾಗ ತಾಲೂಕಿನ ಕುಡಚಿ ಸೇತುವೆ ಮುಳುಗಡೆಯಾಗಿದೆ. ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ನೀರು ಹೆಚ್ಚಳದಿಂದ ರಾಜ್ಯ ಹೆದ್ದಾರಿ ಸಂಪರ್ಕ ಕಡಿತವಾಗಿದೆ. ಕುಡಚಿ- ಉಗಾರ ಮದ್ಯದ ಸೇತುವೆ ಜಲಾವೃತವಾಗಿದೆ. ಇದು ಜಮಖಂಡಿ-ಮೀರಜ್ ನ ಮುಖ್ಯ ಅಂತರರಾಜ್ಯ ಹೆದ್ದಾರಿಯಾಗಿದೆ.

ಅಲ್ಲದೆ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ನಾಗನೂರ-ಗೋಟುರ ಸೇತುವೆ ಮುಳುಗಡೆಯಾಗಿದೆ. ಹಿರಣ್ಯಕೇಶಿ ನದಿಗೆ ಅಡ್ಡಲಾಗಿ ಈ ಸೇತುವೆ ನಿರ್ಮಿಸಲಾಗಿದ್ದು, ಇದರಿಂದಾಗಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನುಗ್ಗುತ್ತಿದ್ದ ಕಳ್ಳ ಮಾರ್ಗ ಬಂದ್ ಆದಂತಾಗಿದೆ. ಮಹಾರಾಷ್ಟ್ರದಿಂದ ಕರ್ನಾಟಕ ಬರುವವರಿಗೆ ನಾಗನೂರ ಸೇತುವೆ ಕಳ್ಳ ಮಾರ್ಗವಾಗಿತ್ತು. ಸೇತುವೆ ಮುಳುಗಡೆಯಿಂದ ಈ ಕಳ್ಳ ಮಾರ್ಗ ಬಂದ್ ಆಗಿದೆ.

ಹಿರಣ್ಯಕೇಶಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಸಂಕೇಶ್ವರ ಪಟ್ಟಣದ ಗ್ರಾಮ ದೇವತೆ ಲಕ್ಷ್ಮೀ ದೇವಸ್ಥಾನ ಜಲಾವೃತವಾಗಿದೆ. ಕೆಲವು ಮನೆಗಳಿಗೆ ನದಿಯ ಹಿನ್ನೀರು ನುಗ್ಗಿದ್ದು, ಸಂಕೇಶ್ವರ ಪಟ್ಟಣದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಅಲ್ಲದೆ ಸಂಕೇಶ್ಚರ ಪಟ್ಟಣದ ಶಂಕರಲಿಂಗ ದೇವಸ್ಥಾನಕ್ಕೂ ನೀರು ನುಗ್ಗಿದೆ.

Comments

Leave a Reply

Your email address will not be published. Required fields are marked *