ಬಳ್ಳಾರಿ ವಿಭಜನೆ ವಿರೋಧಿಸಿ ರಾಜೀನಾಮೆಗೆ ನಾನು ಸಿದ್ಧ: ಸೋಮಶೇಖರ ರೆಡ್ಡಿ

ಬಳ್ಳಾರಿ: ನೂತನ ವಿಜಯನಗರ ಜಿಲ್ಲೆ ಘೋಷಣೆ ವಿಚಾರವಾಗಿ ನನ್ನ ಕ್ಷೇತ್ರದ ಜನ ಇಷ್ಟಪಟ್ಟರೆ ರಾಜೀನಾಮೆ ನೀಡುವುದಾಗಿ ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬಳ್ಳಾರಿಯಲ್ಲಿಂದು ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ಜನರು ಜಿಲ್ಲೆ ವಿಭಜನೆ ವಿಚಾರವಾಗಿ ರಾಜೀನಾಮೆ ನೀಡಿ ಅಂದ್ರೆ ನಾನು ರಾಜೀನಾಮೆ ನೀಡುವೆ. ನನ್ನನ್ನು ಮತಗಳು ಹಾಕಿ ಚುನಾಯಿಸಿದ ಮತದಾರರು ಹೇಳಿದ್ರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದರು.

ಈ ಜಿಲ್ಲೆಯ ವಿಭಜನೆ ಮಾಡೋ ವಿಚಾರವಾಗಿ ನನಗೆ ಪಶ್ಚಿಮ ತಾಲೂಕುಗಳ ಜನರು ಫೋನ್ ಮಾಡಿ ಮಾತನಾಡಿದ್ದಾರೆ. ಯಾಕೇ ವಿಭಜನೆ ಮಾಡ್ತಾರೆ ಅಂತ ಗೋಳು ಹೇಳಿಕೊಂಡಿದ್ದಾರೆ. ಸಿಎಂ ಆಗಿ ಬಿಎಸ್ ಯಡಿಯೂರಪ್ಪ ಇದ್ದಾರೆ ನಿಮ್ಮದೇ ಸರ್ಕಾರ ಇದೆ ಹಣ ತಂದು ಅಭಿವೃದ್ಧಿ ಮಾಡಬಹುದನ್ನು ಬಿಟ್ಟು ವಿಭಜನೆ ಮಾಡುತ್ತಿದ್ದೀರಾ ಎಂದು ಕೇಳುತ್ತಿದ್ದಾರೆ. ಹೀಗಾಗಿ ಜಿಲ್ಲಾ ಕೇಂದ್ರ ಕಚೇರಿಗಳು ಬೇಕಾದರೆ ಹೊಸಪೇಟೆಗೆ ಶಿಫ್ಟ್ ಆಗಲಿ. ಆದರೆ ಜಿಲ್ಲೆ ಒಡೆಯೋದು ಬೇಡ ಅಂತ ಮನವಿ ಮಾಡುವೆ ಎಂದು ತಿಳಿಸಿದರು.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಬಳ್ಳಾರಿ ಜಿಲ್ಲೆಗೆ ಸೇರಿಸೋದು ಬೇಡ. ಈ ಬಗ್ಗೆ ನಾನು ಶ್ರೀರಾಮುಲು ಅವರ ಮನವೊಲಿಸುವೆ. ನಾಳೆ ನೆರೆಯ ಆಂಧ್ರ ಪ್ರದೇಶದ ನಾನಾ ತಾಲೂಕುಗಳು ಬರುತ್ತವೆ ಚಳ್ಳಕೆರೆನೂ ಕೇಳುತ್ತಾರೆ. ಹಾಗೆ ಸೇರಿಸುತ್ತಾ ಹೋದರೆ ಸೌಲಭ್ಯದಿಂದ ನಮ್ಮ ಭಾಗದ ಮಕ್ಕಳು ವಂಚಿತರಾಗುತ್ತಾರೆ. ಯಾವುದೇ ಕಾರಣಕ್ಕೂ ಮೊಳ ಕಾಲ್ಮೂರು ಬಳ್ಳಾರಿಗೆ ಸೇರಿಸೋದು ಬೇಡ ಎಂದು ಆಗ್ರಹಿಸಿದ್ದಾರೆ.

Comments

Leave a Reply

Your email address will not be published. Required fields are marked *