ನಮ್ಮನ್ನ ರಾಜಕೀಯವಾಗಿ ಮುಗಿಸಲು ಕುತಂತ್ರ ಮಾಡ್ತಿದ್ದಾರೆ: ವಿಜಯ್ ಕುಲಕರ್ಣಿ

ಹುಬ್ಬಳ್ಳಿ: ನಮ್ಮನ್ನು ರಾಜಕೀಯವಾಗಿ ಮುಗಿಸುವುದಕ್ಕೆ ಈ ರೀತಿ ಕುತಂತ್ರ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದಲ್ಲಿ ರಾಜಕೀಯ ಕೈವಾಡವಿದೆ. ಬಿಜೆಪಿ ಅವರದ್ದೇ ಕೈವಾಡವಿದೆ ಎಂದು ನೇರವಾಗಿ ಬಿಜೆಪಿ ಮೇಲೆ ಆರೋಪ ಮಾಡಿದರು.

ನಮ್ಮನ್ನ ರಾಜಕೀಯವಾಗಿ ಮುಗಿಸೋದಿಕ್ಕೆ ಈ ರೀತಿ ಕುತಂತ್ರ ಮಾಡುತ್ತಿದ್ದಾರೆ. ಕಾನೂನು ರೀತಿಯಾಗಿ ನಾವು ಹೋರಾಟ ಮಾಡಲಿದ್ದೇವೆ. ಏನೇ ಬಂದರೂ ನಾವು ಎದುರಿಸಲು ಸಿದ್ಧರಿದ್ದೇವೆ. ರಾಜಕೀಯವಾಗಿ ನಮ್ಮನ್ನ ಮುಕ್ತಾಯಗೊಳಿಸಲು ಈ ಪ್ರಕರಣ ನಮ್ಮ ಮೇಲೆ ತಳುಕು ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಏನೇ ಕುತಂತ್ರ ಮಾಡಿದರೂ ನಾವು ಕಾನೂನು ರೀತಿ ಹೋರಾಟ ನಡೆಸಲಿದ್ದೇವೆ. ನಾವಿಬ್ಬರೂ ರಾಜಕೀಯವಾಗಿ ಬಲಿಷ್ಟರಾಗಿರೋ ಕಾರಣ ಈ ರೀತಿ ಮಾಡುತ್ತಿದ್ದಾರೆ. ಲಿಂಗಾಯತ ಮುಖಂಡರು ಬೆಳೆಯಬಾರದು ಅನ್ನೋ ಕಾರಣಕ್ಕೆ ಈ ರೀತಿ ಕುತಂತ್ರ ನಡೆಸಿದ್ದಾರೆ ಎಂದು ಕಿಡಿಕಾರಿದರು.

Comments

Leave a Reply

Your email address will not be published. Required fields are marked *