ನಮ್ಮೂರಿಗೆ ಬರಬೇಡಿ, ಬಸ್ ಬೇಡ್ವೇ ಬೇಡ- ಗ್ರಾಮಸ್ಥರಿಂದ ತಡೆ

– ನಮಗೆ ಬಸ್ ಅವಶ್ಯವಿಲ್ಲ ಎಂದ ಜನ

ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದರಿಂದಾಗಿ ಜಿಲ್ಲೆಯ ಜನ ಭಯಭೀತರಾಗಿದ್ದಾರೆ. ಹೀಗಾಗಿ ಬಸ್ ತಡೆದು ಪತಿಭಟನೆ ನಡೆಸಿದ್ದು, ನಮ್ಮೂರಿಗೆ ಯಾರೂ ಬರುವುದು ಬೇಡ, ಬಸ್ ನಮಗೆ ಅವಶ್ಯವೇ ಇಲ್ಲ ಮೊದಲು ಬಸ್ ಸಂಚಾರ ನಿಲ್ಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಳಿಗಿರಿ ರಂಗನಾಥ ಬೆಟ್ಟದ ಹೊಸಪೋಡು ಬಳಿ ಘಟನೆ ನಡೆದಿದ್ದು, ಕೊರೊನಾ ಆತಂಕ ಹಿನ್ನೆಲೆ ಗ್ರಾಮಕ್ಕೆ ಬಸ್ ಬರದಂತೆ ಸೋಲಿಗರು ರಸ್ತೆ ತಡೆ ನಡೆಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆದರೆ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಬಿಳಿಗಿರಿ ರಂಗನಾಥನ ಸನ್ನಿಧಿಗೆ ಯಳಂದೂರಿನಿಂದ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಇದೀಗ ಬಸ್ ಸಂಚಾರಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ನಾವು ಕಳೆದ ಮೂರ್ನಾಲ್ಕು ದಿನಗಳಿಂದ ಮನವಿ ಮಾಡುತ್ತಿದ್ದೇವೆ. ನಮ್ಮೂರಿಗೆ ಬಸ್ ಬಿಡಬೇಡಿ, ನಮಗೆ ಬಸ್ ಅವಶ್ಯವಿಲ್ಲ ಎಂದು ಸಾರಿಗೆ ಅಧಿಕಾರಿಗಳಿಗೆ ಹೇಳಿದ್ದೇವೆ ಆದರೂ ಬಸ್ ಬಿಡಲಾಗುತ್ತಿದೆ. ಇದರಿಂದಾಗಿ ಗ್ರಾಮದಲ್ಲಿ ಕೊರೊನಾ ಭಯ ಕಾಡುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಇಂದು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರವಾಸಿಗರಿಗೆ, ಭಕ್ತರಿಗೆ ಬಿಆರ್‍ಟಿಗೆ ನಿರ್ಬಂಧ ವಿಧಿಸುವಂತೆ ಒತ್ತಾಯಿಸಿದ್ದಾರೆ.

Comments

Leave a Reply

Your email address will not be published. Required fields are marked *