ನಮ್ಮ ದೇಶಕ್ಕೆ ಸಹಾಯ ಹಸ್ತದ ಅವಶ್ಯಕತೆ ಇದೆ: ರಾಹುಲ್ ಗಾಂಧಿ

ನವದೆಹಲಿ: ಕೊರೊನಾ ಪಿಡುಗಿನ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಕಷ್ಟದಲ್ಲಿ ಸಿಲುಕಿರುವವರಿ ಸಹಾಯ ಮಾಡುವಂತೆ ಮನವಿ ಮಾಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ.

ಈ ಬಿಕ್ಕಟ್ಟಿನ ಸಮಯದಲ್ಲಿ ನಮ್ಮ ದೇಶಕ್ಕೆ ಸಹಾಯ ಹಸ್ತದ ಅವಶ್ಯಕತೆ ಇದೆ. ಜೀವಗಳನ್ನು ಉಳಿಸಲು ನಮ್ಮಿಂದಾಗುವ ಎಲ್ಲಾ ಸಹಾಯವನ್ನು ಮಾಡೋಣ ಕೊರೊನಾ ವೈಸರ್ ವಿರುದ್ಧದ ಹೋರಾಟದಲ್ಲಿ ಇನ್ನಷ್ಟು ಬಲಿಷ್ಠಹೊಳಿಸಲು ಸ್ವೀಕ್ ಅಪ್ ಟು ಸೇವ್ ಲೈವ್ಸ್ ಅಭಿಯಾನದೊಂದಿಗೆ ಕೈ ಜೋಡಿಸಿ ಎಂದು ಟ್ವೀಟ್ ಮೂಲಕವಾಗಿ ಮನವಿ ಮಾಡಿದ್ದಾರೆ.

ಆಮ್ಲಜನಕ, ಹಾಸಿಗೆ ಮತ್ತು ವೆಂಟಿಲೇಟರ್ ಕೊರತೆಗೆ ಸಂಬಧಿಸಿದ ಸಣ್ಣ ವೀಡಿಯೋ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವು ಜನರಿಗೆ ನೆರವನ್ನು ಒದಗಿಸುವ ನಿಟ್ಟಿನಲ್ಲಿ ಎಐಸಿಸಿಯ ಮುಖ್ಯ ಕಚೇರಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ(ಪಿಸಿಸಿ) ಕಚೇರಿಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿದೆ. ರಾಹುಲ್ ಗಾಂಧಿ ಕೊರೊನಾ ಜಾಗೃತಿ ಮತ್ತು ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರದ ಕೆಲಸಗಳ ಕುರಿತಾಗಿ ಟ್ವೀಟ್ ಮಾಡುತ್ತಲೇ ಇರುತ್ತಾರೆ.

Comments

Leave a Reply

Your email address will not be published. Required fields are marked *