ನಾಲ್ಕು ಗೇಟ್‍ಗಳ ಮೂಲಕ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಕ್ಕೆ

ಮಡಿಕೇರಿ: ಕೊಡಗಿನಲ್ಲಿ ಧಾರಾಕಾರವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಕ್ಕೆ ಹರಿಸಲಾಗುತ್ತಿದೆ.

ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಮ್ಮಿಯಾಲ, ಮುಕೋಡ್ಲು ಮಾದಾಪುರ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರದಿಂದ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಆದ್ದರಿಂದ ಮುಂಜಾಗೃತೆಯಿಂದ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್‍ಗಳ ಮೂಲಕ ಹೆಚ್ಚುವರಿ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.

ಹಾರಂಗಿ ಜಲಾಶಯದಿಂದ 3,750 ಕ್ಯೂಸೆಕ್ ನದಿಗೆ ಹಾಗೂ 1,000 ಕ್ಯೂಸೆಕ್ ಪ್ರಮಾಣದ ನೀರನ್ನು ಕಾಲುವೆಗೆ ಬಿಡುಗಡೆ ಮಾಡಲಾಗಿದೆ. ಅಲ್ಲದೇ ಜಲಾಶಯದ ವ್ಯಾಪ್ತಿಯ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಭಾನುವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಹಾರಂಗಿಗೆ 3,009 ಕ್ಯೂಸೆಕ್ ನೀರಿನ ಒಳ ಹರಿವು ಹೆಚ್ಚಳವಾಗಿದೆ.

Comments

Leave a Reply

Your email address will not be published. Required fields are marked *