ನಿಧಿ ವದಂತಿ ನಂಬಿ ಗುಂಡಿ ತೋಡಿ ಬರಿಗೈಯಲ್ಲಿ ತೆರಳಿದ ಅಧಿಕಾರಿಗಳು

ಮಂಗಳೂರು: ಹೊಲದಲ್ಲಿ ನಿಧಿ ಇದೆ ಎಂಬ ವದಂತಿ ಹಬ್ಬಿದ ಹಿನ್ನಲೆಯಲ್ಲಿ ಅಧಿಕಾರಿಗಳು ಬಂದು ಹುಡುಕಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಳಿ ನಡೆದಿದೆ.

ಬೆಳ್ತಂಗಡಿಯ ನಡ ಗ್ರಾಮದ ಪುಣಿತ್ತಡಿ ಎಂಬಲ್ಲಿನ ನಿವಾಸಿ ಆನಂದ ಶೆಟ್ಟಿಗೆ ಸೇರಿದ ಗದ್ದೆಯಲ್ಲಿ ಇತ್ತೀಚೆಗೆ ಕೊಳವೆ ಬಾವಿ ಕೊರೆಯಿಸಿದ್ದ ವೇಳೆ ಭೂಮಿ ಕುಸಿದಿದ್ದು ಸುಮಾರು 10 ಅಡಿಯಷ್ಟು ಆಳದ ಗುಂಡಿಯಾಗಿತ್ತು. ಹೀಗಾಗಿ ಭೂಮಿಯೊಳಗೆ ನಿಧಿ ಇರುವ ಶಂಕೆ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿದ್ದು, ಜನ ಸೇರಲಾರಂಭಿಸಿದರು.

ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಮಹೇಶ್, ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಹಿಟಾಚಿ ಮೂಲಕ ಶೋಧ ಕಾರ್ಯ ನಡೆಸಿದರು. ಸುಮಾರು ಒಂದು ಗಂಟೆಗಳ ಕಾಲ ಗುಂಡಿ ತೆಗೆದು ಪರಿಶೀಲಿಸಿದ ಬಳಿಕ ಏನೂ ಸಿಗದೆ ಗುಂಡಿಗೆ ಮಣ್ಣು ಮುಚ್ಚಿ ಬರಿಗೈಯಲ್ಲೇ ವಾಪಸ್ ಹೋಗಿದ್ದಾರೆ. ಜನರ ವದಂತಿಯಿಂದ ಕೆಲಕಾಲ ಅಧಿಕಾರಿಗಳು ತಲೆ ಕೆಡಿಸಿಕೊಂಡಿದ್ದರು.

Comments

Leave a Reply

Your email address will not be published. Required fields are marked *