ನಿಮ್ಮನ್ನು ಕೊಲೆ ಮಾಡ್ತೇವೆ – ಯೋಗಿ ಆದಿತ್ಯನಾಥ್, ಅಮಿತ್ ಶಾಗೆ ಬೆದರಿಕೆ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊಲೆ ಬೆದರಿಕೆಯೊಂದು ಬಂದೆ.

ಯೋಗಿ ಆದಿತ್ಯನಾಥ್ ಹಾಗೂ ಅಮಿತ್ ಶಾ ಅವರಿಗೆ ಕೊಲೆ ಮಾಡುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ. ಸದ್ಯ ಇ-ಮೇಲ್ ನನ್ನು ಕೂಡಲೇ ಮುಂಬೈನ ಕೇಂದ್ರ ಮೀಸಲು ಪೊಲಿಸ್ ಪಡೆ(ಸಿಆರ್‌ಪಿಎಫ್)ಗೆ ಕಳುಹಿಸಲಾಗಿದೆ. ಇಮೇಲ್ ನಲ್ಲಿ ಪೂಜಾ ಸ್ಥಳಗಳು ಹಾಗೂ ಪ್ರಮುಖ ಸ್ಥಳಗಳ ಮೇಲೆ ದಾಳಿ ಮಾಡುವುದಾಗಿಯೂ ತಿಳಿಸಲಾಗಿದೆ.

ಆತ್ಮಹತ್ಯಾ ದಾಳಿಯ ಮೂಲಕ ಯೋಗಿ ಆದಿತ್ಯನಾಥ್ ಮತ್ತು ಅಮಿತ್ ಶಾ ಅವರನ್ನು ಇಲ್ಲವಾಗಿಸುತ್ತೇವೆ. ಅಲ್ಲದೆ ನಮ್ಮಲ್ಲಿ 11 ಆತ್ಮಹತ್ಯಾ ಬಾಂಬರ್ ಗಳಿದ್ದಾರೆ. ಯೋಗಿ ಆದಿತ್ಯನಾಥ್ ಹಾಗೂ ಅಮಿತ್ ಶಾ ಅವರನ್ನು ಕೊಲೆ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಇ-ಮೇಲ್ ನಲ್ಲಿ ಬೆದರಿಕೆ ಹಾಕಲಾಗಿದೆ.

Comments

Leave a Reply

Your email address will not be published. Required fields are marked *