ನಿಮ್ಮ ಫೋನ್ ಕದ್ದಾಲಿಕೆ ಮಾಡುವ ದರಿದ್ರ ನಮ್ಮ ಸರ್ಕಾರಕ್ಕೆ ಬಂದಿಲ್ಲ: ಸುಧಾಕರ್

ಬೆಂಗಳೂರು: ನನ್ನ ಫೋನ್ ಟ್ಯಾಪಿಂಗ್ ಆಗ್ತಿರೋದು ನಿಜ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಎರಡು ಟ್ವೀಟ್ ಮಾಡಿರುವ ಸಚಿವರು, ಡಿಕೆ ಶಿವಕುಮಾರ್ ಅವರೇ, ನೀವು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದಾಗ ಧರ್ಮ-ಸಂಸ್ಕೃತಿಯ ಪ್ರತೀಕ, ಪವಿತ್ರವಾದ ಮನಸ್ಸುಳ್ಳ ಆದಿಚುಂಚನಗಿರಿ, ರಂಭಾಪುರಿ, ಸಿದ್ಧಗಂಗಾ ಮಠದ, ಸಿರಿಗೆರೆ ಮಠ, ಸುತ್ತೂರು ಮಠ ಶ್ರೀಗಳು ಸೇರಿದಂತೆ 7 ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಮಾಡಿದ್ದು ಅದು ನೆನಪಿದೆಯಾ ಎಂದು ಪ್ರಶ್ನಿಸಿದ್ದಾರೆ.

ಸ್ವಾಮೀಜಿಗಳ ಫೋನ್ ಕದ್ದಾಲಿಕೆಯ ಕೇಸ್ ಇನ್ನೂ ಜೀವಂತವಾಗಿದೆ. ನಿಮ್ಮ ಫೋನ್ ಕದ್ದಾಲಿಕೆ ಮಾಡುವಂತಹ ದರಿದ್ರ ನಮ್ಮ ಸರ್ಕಾರಕ್ಕೆ ಬಂದಿಲ್ಲ. ನಿಮ್ಮ ಹೇಳಿಕೆ ಹಾಸ್ಯಾಸ್ಪದ. ಪ್ರತಿ ಮಾತಿನಲ್ಲೂ ಪ್ರಚಾರ ಬಯಸುತ್ತೀರಲ್ಲ. ನಾವು ಅಧಿಕಾರದಲ್ಲಿದ್ದಾಗ ಅನೇಕ ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿದ್ದೆವು? ಎಂಬ ಸತ್ಯವನ್ನು ಹೇಳಿಬಿಡಿ ಎಂದು ಡಿಕೆಶಿ ವಿರುದ್ಧ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನನ್ನ ಫೋನ್ ಟ್ಯಾಪಿಂಗ್ ಆಗ್ತಿರೋದು ನಿಜ- ಸರ್ಕಾರದ ವಿರುದ್ಧ ಡಿಕೆಶಿ ಗಂಭೀರ ಆರೋಪ

ಡಿಕೆಶಿ ಹೇಳಿದ್ದೇನು?
ನಗರದಲ್ಲಿ ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಡಿಕೆಶಿ, ನನ್ನ ಫೋನ್ ಟ್ಯಾಪ್ ಆಗುತ್ತಿದೆ. ಇಲ್ಲಿಯವರೆಗೆ ಚೆನ್ನಾಗಿತ್ತು, ಇವತ್ತು ಬೆಳಗ್ಗೆಯಿಂದ ಕರೆ ಬರುತ್ತಿಲ್ಲ. ಇವತ್ತು ಇದರ ಬಗ್ಗೆ ದೂರು ನೀಡುತ್ತೇನೆ ಎಂದು ಗಂಭಿರ ಆರೋಪ ಮಾಡಿದ್ದರು. ಅಲ್ಲದೆ ಪಾಪ ಏನು ಬೇಕೋ ಮಾಡಿಕೊಳ್ಳಲಿ. ಆದರೆ ನನ್ನ ಫೋನ್ ಟ್ಯಾಪಿಂಗ್ ಆಗುತ್ತಿರುವುದು ನಿಜ. ಈ ಹಿಂದೆಯೂ ಫೋನ್ ಟ್ಯಾಪ್ ಆಗಿತ್ತು. ಈಗ ಮತ್ತೆ ಆಗ್ತಿದೆ. ನಮ್ಮ ಸುದರ್ಶನ್ ಬೆಳಗ್ಗೆಯಿಂದ 25 ಕಾಲ್ ಮಾಡಿದ್ದಾರೆ. ಆದರೆ ಕರೆ ಬರುತ್ತಿಲ್ಲ. ಇವತ್ತು ಇದರ ಬಗ್ಗೆ ದೂರು ನೀಡುತ್ತೇನೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಯಾರಿಗೆ ಅನುಭವವಿದ್ಯೋ ಅವರೇ ಈಗ ಟ್ಯಾಪಿಂಗ್ ಬಗ್ಗೆ ಮಾತಾಡ್ತಿರೋದು ಆಶ್ಚರ್ಯ: ಅಶೋಕ್

Comments

Leave a Reply

Your email address will not be published. Required fields are marked *