ನಿರಾಣಿಗೆ ಅಧಿಕಾರದ ವ್ಯಾಮೋಹ ಹೆಚ್ಚಾಗಿದೆ: ವಿಜಯಾನಂದ ಕಾಶಪ್ಪನವರ್

ಯಾದಗಿರಿ: ಸಚಿವ ಮುರುಗೇಶ್ ನಿರಾಣಿ ಅವರೇ ದೊಡ್ಡ ನಾಲಾಯಕ್. ನಿರಾಣಿಯವರಿಗೆ ಅಧಿಕಾರದ ಹುಚ್ಚು ಹಿಡಿದಿದೆ. ಅವರಿಗೆ ಅಧಿಕಾರದ ವ್ಯಾಮೋಹ ಹೆಚ್ಚಾಗಿದೆ ಅಂತ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ತಿರುಗೇಟು ನೀಡಿದ್ದಾರೆ.

ಯಾದಗಿರಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾನಾಡಿದ ಅವರು, ಯತ್ನಾಳ್ ವಿರುದ್ಧ ಸಚಿವ ನಿರಾಣಿ ನಾಲಾಯಕ್ ಪದ ಬಳಕೆ ವಿಚಾರ ಸಂಬಂಧ ಪ್ರತಿಕ್ರಿಯಸಿದರು. ನಿರಾಣಿಯವರಿಗೆ ಸಮಾಜದ ಬಗ್ಗೆ ಕಳಕಳಿ ಇಲ್ಲ. ನನ್ನ ಬಗ್ಗೆ ಸ್ವಾಮೀಜಿ ಬಗ್ಗೆ ಅತೀ ಕೀಳಾಗಿ ಮಾತನಾಡಿರುವುದು ಮಾಧ್ಯಮದಲ್ಲಿ ಕಂಡಿದ್ದೀರಿ. ಸದನದಲ್ಲಿ ವರದಿ ತರಿಸಿಕೊಂಡು ಆರು ತಿಂಗಳಲ್ಲಿ ಮೀಸಲಾತಿ ನೀಡುವ ಬಗ್ಗೆ ಸಿಎಂ ಭರವಸೆ ನೀಡಿದ್ದಾರೆ ಎಂದರು.

ಇವರ್ಯಾಕೆ ಹಿಯ್ಯಾಳಿಸುವಂತ ಮಾತಾಡುತ್ತಿದ್ದಾರೆ. ಬಸನಗೌಡ ಯತ್ನಾಳ್ ಅವರು ಸಮಾಜದ ಪರ ನಿಂತಿದಕ್ಕೆ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಸಮಾಜದ ವಿರುದ್ಧ ಹೀಗೆ ಹೇಳಿಕೆಗಳನ್ನ ಕೊಟ್ರೆ ಸಮಾಜ ತಕ್ಕ ಪಾಠ ಕಲಿಸುತ್ತದೆ.ಸ್ವಾಮಿಜೀ ಅವರ ಆಶೀರ್ವಾದದಿಂದ ಮಂತ್ರಿಯಾಗಿರೋದನ್ನ ಮರೆಯಬಾರದೆಂದು ಎಚ್ಚರಿಕೆ ನೀಡಿದರು.

Comments

Leave a Reply

Your email address will not be published. Required fields are marked *