ನಿರಾಣಿ ಬೆನ್ನಲ್ಲೇ ಅರವಿಂದ ಬೆಲ್ಲದ್ ವಾರಾಣಸಿ ಭೇಟಿ

ಬೆಂಗಳೂರು: ಜುಲೈ 26ಕ್ಕೆ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನಿಡುತ್ತಿದ್ದಾರೆ ಎಂದು ಸುದ್ದಿ ಹೊರಬಿದ್ದ ಬೆನ್ನಲ್ಲೇ ಇದೀಗ ಸಿಎಂ ಆಕಾಂಕ್ಷಿಗಳು ಕ್ಷೇತ್ರ ಭೇಟಿಯಲ್ಲಿ ಬ್ಯುಸಿಯಾಗಿದ್ದಾರೆ.

ಹೌದು. ಇತ್ತೀಚೆಗಷ್ಟೇ ಗಣಿ ಸಚಿವ ಮುರುಗೇಶ್ ನಿರಾಣಿಯವರು ವಾರಾಣಸಿಗೆ ಹೋಗಿ ಬಂದಿದ್ದರು. ಇದೀಗ ಈ ಬೆನ್ನಲ್ಲೇ ಶಾಸಕ ಅರವಿಂದ್ ಬೆಲ್ಲದ್ ಅವರು ವಾರಾಣಸಿಗೆ ಭೇಟಿ ನೀಡಿದ್ದಾರೆ.

ಸಿಎಂ ನಿರ್ಗಮನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯಮಂತ್ರಿ ಆಗಿ ಯಡಿಯೂರಪ್ಪ ಇನ್ನು 6 ದಿನ ಮಾತ್ರ ಇರಲಿದ್ದಾರೆ. ಇತ್ತ ಸಿಎಂ ಹುದ್ದೆ ಆಕಾಂಕ್ಷಿಗಳ ಪಟ್ಟಿಯಲ್ಲಿ ಬೆಲ್ಲದ್ ಹೆಸರು ಕುಡ ಕೇಳಿ ಬಂದಿದೆ. ಹೀಗಾಗಿ ಬೆಲ್ಲದ್ ಕಾಶಿಯಾತ್ರೆ ಕೈಗೊಂಡಿದ್ದಾರೆ. ಒಟ್ಟಿನಲ್ಲಿ ಇದೀಗ ನಿರಾಣಿ ಬಳಿಕ ಬೆಲ್ಲದ್ ‘ಕಾಶಿ’ ಯಾತ್ರೆ ಮಾಡಿರುವುದು ಕುತೂಹಲ ಹುಟ್ಟಿಸಿದೆ. ಇದನ್ನೂ ಓದಿ: ಯಡಿಯೂರಪ್ಪ ಸರ್ಕಾರವನ್ನು ಕೆಳಗಿಳಿಸಿದರೆ ಬಿಜೆಪಿ ಸರ್ವನಾಶ: ಶ್ರೀ ಕಾರದವೀರಬಸವ ಸ್ವಾಮೀಜಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹಾ ನಿರ್ಗಮನಕ್ಕೆ ವೇದಿಕೆ ಸಜ್ಜಾಗಿದೆ. ಮುಂದಿನ ಸೋಮವಾರದಿಂದ ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ಶುರುವಾಗೋದು ನಿಶ್ಚಿತವಾಗುತ್ತಿದ್ದಂತೆ ಮಠಾಧೀಶರು ಎಂಟ್ರಿಯಾಗಿದ್ದಾರೆ. 35ಕ್ಕೂ ಹೆಚ್ಚು ಸ್ವಾಮೀಜಿಗಳು ಸಿಎಂ ಭೇಟಿಯಾಗಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡದಂತೆ ಒತ್ತಡ ಹೇರಿದ್ದಾರೆ.

ಲಿಂಗಾಯತ ಪ್ರಬಲ ನಾಯಕನನ್ನು ಅಧಿಕಾರದಿಂದ ಕೆಳಗಿಳಿಸಿದ್ರೆ, ಪಕ್ಷ ಸರ್ವನಾಶ ಆಗೋದು ಖಚಿತ ಅಂತ ಹೈಕಮಾಂಡ್‍ಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಇದರ ನಡುವೆ ಯಡಿಯೂರಪ್ಪ ಪರವಾಗಿ ಒಂದೆರಡು ದಿನಗಳಲ್ಲಿ 500ಕ್ಕೂ ಹೆಚ್ಚು ಮಠಾಧೀಶರು ಬೆಂಗಳೂರಲ್ಲಿ ಸಭೆ ಸೇರಲು ತೀರ್ಮಾನಿಸಿದ್ದಾರೆ.

Comments

Leave a Reply

Your email address will not be published. Required fields are marked *