ನೀನು ಎಲ್ಲಿದ್ದರೂ ನಿನ್ನ ನಗು ಜೀವಂತ ಚಿರು ಮಗನೆ: ಅರ್ಜುನ್ ಸರ್ಜಾ ಭಾವುಕ

ಬೆಂಗಳೂರು: ನಟ, ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅವರು ನಮ್ಮನ್ನು ಅಗಲಿ ಇಂದಿಗೆ ಬರೋಬ್ಬರಿ ಒಂದು ವರ್ಷವೇ ಕಳೆದ ಹೋಗಿದೆ. ಈ ಹಿನ್ನೆಲೆಯಲ್ಲಿ ಸದಾ ಎಲ್ಲರ ಮನದಲ್ಲೂ ಅಚ್ಚಳಿಯದೇ ಉಳಿದಿರುವ ಚಿರುವನ್ನು ಕುಟುಂಬ ಹಾಗೂ ಅಭಿಮಾನಿಗಳು ನೆನಪಿಸಿಕೊಂಡಿದ್ದಾರೆ. ಅಂತೆಯೇ ಚಿರು ಮುದ್ದಿನ ಮಾವ, ನಟ ಅರ್ಜುನ್ ಸರ್ಜಾ ಕೂಡ ನೆನಪು ಮಾಡಿಕೊಂಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅರ್ಜುನ್ ಸರ್ಜಾ, ನಿನ್ನ ಕಳೆದುಕೊಂಡು ಅದಾಗಲೇ ಒಂದು ವರ್ಷ ಕಳೆದ ಹೋಗಿದೆ. ಆದರೆ ಜೀವನ ಪೂರ್ತಿ ನಿನ್ನನ್ನು ನಾವು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನೀನು ಎಲ್ಲೇ ಇರು ನಿನ್ನ ನಗು ಜೀವಂತವಾಗಿರುತ್ತದೆ ಎಂದು ನಂಬಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಚಿರು ಮಗನನ್ನ 20 ವರ್ಷದ ನಂತ್ರ ನಾನೇ ಲಾಂಚ್ ಮಾಡ್ತೀನಿ: ಅರ್ಜುನ್ ಸರ್ಜಾ

6 ತಿಂಗಳ ಹಿಂದೆ ಚಿರುಗೆ ಮಗು ಹುಟ್ಟಿದಾಗಲೂ ಅರ್ಜುನ್ ಸರ್ಜಾ ಅವರು ಕೆಲವೊಂದು ಬರೆದುಕೊಳ್ಳುವ ಮೂಲಕ ಭಾವುಕರಾಗಿದ್ದರು. ಇನ್ ಸ್ಟಾಗ್ರಾಂನಲ್ಲಿ ಅಳಿಯನ ಜೊತೆಗಿನ ಫೋಟೋವೊಂದನ್ನು ಅಪ್ಲೋಡ್ ಮಾಡಿ, ಈ ಸಮಯದಲ್ಲಿ ನಿನ್ನನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತೇನೆ ಎಂಬುದನ್ನು ಹೇಳಿಕೊಳ್ಳಲು ಕೂಡ ಸಾಧ್ಯವಾಗುತ್ತಿಲ್ಲ ಚಿರು ಮಗನೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ನಮ್ಮ ನೋವು ದೂರ ಮಾಡಲು ಮಗು ರೂಪದಲ್ಲಿ ಚಿರು ಬಂದಿದ್ದಾನೆ – ಅರ್ಜುನ್ ಸರ್ಜಾ

ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ 2020ರ ಜೂನ್ 7ರಂದು ನಿಧನರಾಗಿದ್ದಾರೆ. ಚಿರಂಜೀವಿ ಸರ್ಜಾ ನಿಧನಕ್ಕೆ ಅವರ ಕುಟುಂಬ ಮಾತ್ರವಲ್ಲದೇ ಅವರ ಅಭಿಮಾನಿ ಬಳಗವೇ ಕಣ್ಣೀರು ಹಾಕಿತ್ತು. ಇಂದು ಮೊದಲ ವರ್ಷದ ಪುಣ್ಯತಿಥಿಯಾಗಿದ್ದು, ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಇತ್ತ ಅಭಿಮಾನಿಗಳು, ಚಿರು ಅಣ್ಣ ಪ್ರೀತಿಯಲ್ಲಿ ಗುಣವಂತ, ನಗುವಿನಲ್ಲಿ ಶ್ರೀಮಂತ ಅಭಿಮಾನಿಗಳ ಮನಸ್ಸಲ್ಲಿ ಎಂದಿಗೂ ಜೀವಂತ ಮಿಸ್ ಯು ಚಿರು ಅಣ್ಣ ಎಂದೆಲ್ಲಾ ಮೇಘನಾ ಶೇರ್ ಮಾಡಿರುವ ಫೋಟೋಗಳಿಗೆ ಕಮೆಂಟ್ ಮಾಡುತ್ತಿದ್ದಾರೆ.  ಇದನ್ನೂ ಓದಿ: ಅಪ್ಪ ಚಿರುವನ್ನು ಗುರುತಿಸುತ್ತಿರೋ ನನ್ನ ಮಗನನ್ನು ನೋಡಲು ಹೆಮ್ಮೆಯಾಗ್ತಿದೆ: ಮೇಘನಾ

Comments

Leave a Reply

Your email address will not be published. Required fields are marked *