ನೀ ಇರದೆ ನನಗೆ ಇರಲು ಸಾಧ್ಯವಾಗ್ತಿಲ್ಲ- ಅಣ್ಣನ ನೆನೆದು ಧ್ರುವ ಭಾವುಕ

– ನೀನು ನನಗೆ ವಾಪಸ್ ಬೇಕು

ಬೆಂಗಳೂರು: ಸ್ಯಾಂಡಲ್‍ವುಡ್‍ನ ನಟ ಚಿರಂಜೀವಿ ಸರ್ಜಾ ಅಗಲಿಕೆಯಿಂದ ಇಡೀ ಚಿತ್ರರಂಗವೇ ಶಾಕ್ ಆಗಿತ್ತು. ಇದೀಗ ಅಣ್ಣನ ಹಠಾತ್ ಸಾವಿನಿಂದ ನೊಂದಿರುವ ಧ್ರುವ ಸರ್ಜಾ ಇಂದು ಸೋಷಿಯಲ್ ಮೀಡಿಯಾದಲ್ಲಿ ಭಾವುಕವಾಗಿ ಚಿರು ಬಗ್ಗೆ ಬರೆದುಕೊಂಡಿದ್ದಾರೆ.

ಅಣ್ಣನನ್ನು ಕಳೆದುಕೊಂಡು ಐದು ದಿನಗಳ ಬಳಿಕ ಧ್ರುವ ಸರ್ಜಾ ಇನ್‍ಸ್ಟಾಗ್ರಾಂನಲ್ಲಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಚಿರಂಜೀವಿ ಸರ್ಜಾ ಸಾವಿಗೂ ಒಂದು ದಿನ ಮುನ್ನ ಶೇರ್ ಮಾಡಿಕೊಂಡಿದ್ದ ಫೋಟೋ ನೋಡಿ ನೋವನ್ನು ತೋಡಿಕೊಂಡಿದ್ದಾರೆ.

“ನೀನು ನನಗೆ ವಾಪಸ್ ಬೇಕು. ನೀ ಇರದೆ ನನಗೆ ಇರಲು ಸಾಧ್ಯವಾಗುತ್ತಿಲ್ಲ” ಎಂದು ಧ್ರುವ ಸರ್ಜಾ ನೋವಿನ ನುಡಿಗಳನ್ನು ಸ್ಟೇಟಸ್‍ನಲ್ಲಿ ಬರೆದುಕೊಂಡಿದ್ದಾರೆ. ಧ್ರುವ ಸರ್ಜಾ ಸ್ಟೇಟಸ್ ನೋಡಿ ಅಭಿಮಾನಿಗಳು ತನ್ನ ನಟನಿಗೆ ಸಾಂತ್ವನ ಹೇಳುತ್ತಿದ್ದಾರೆ.

ಭಾನುವಾರ ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೆ ಚಿರಂಜೀವಿ ಸರ್ಜಾ ಮೃತಪಟ್ಟಿದ್ದಾರೆ. ‘ಅಣ್ಣ ಸದಾ ನನ್ನ ಜೊತೆಗಿರಬೇಕು, ನನ್ನ ಫಾರ್ಮ್ ಹೌಸ್‍ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗಲಿ’ ಎಂದು ಸಹೋದರ ಧ್ರುವ ಸರ್ಜಾ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಫಾರ್ಮ್ ಹೌಸ್‍ನಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಸೋಮವಾರ ಅಂತ್ಯಕ್ರಿಯೆ ನಡೆದಿದೆ.

Comments

Leave a Reply

Your email address will not be published. Required fields are marked *