ಪಕ್ಷದ ಪರ ಪ್ರಚಾರ ಮಾಡಿರ್ಬೋದು, ಬಿಜೆಪಿ ಆಕೆಗೆ ಈ ರೀತಿ ಮಾಡಲು ಹೇಳಿತ್ತಾ: ಎಸ್‍ಟಿಎಸ್ ಪ್ರಶ್ನೆ

ಮೈಸೂರು: ಚಂದನವನದ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಪರ ಪ್ರಚಾರ ನಡೆಸಿರಬಹುದು. ಆದರೆ ಆಕೆಯನ್ನು ಈ ರೀತಿ ಮಾಡುವಂತೆ ಪಕ್ಷ ಹೇಳಿಲ್ಲ. ಹೀಗಾಗಿ ಈ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪ್ರಶ್ನೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಆಕೆ ಬಿಜೆಪಿ ಪರ ಪ್ರಚಾರ ಮಾಡಿದ್ದ ವಿಚಾರ ವೈರಲ್ ಆಗುತ್ತಿದೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕೆ ಬಿಜೆಪಿ ಪರ ಪ್ರಚಾರ ಮಾಡಿರಬಹುದು. ಈ ವಿಚಾರದಲ್ಲಿ ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಪ್ರಶ್ನೆ ಇಲ್ಲ. ಇಲ್ಲಿ ಯಾರು ತಪ್ಪು ಮಾಡಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲೂ ಹೇಳಿದ್ದೇವೆ. ಸಿಎಂ ಪ್ರತಿದಿನ ವರದಿ ತರಿಸಿಕೊಳ್ಳುತ್ತಿದ್ದಾರೆ. ಎಷ್ಟೇ ಪ್ರಭಾವಿಗಳಿದ್ದರೂ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಸೋಮಶೇಖರ್, ಡ್ರಗ್ಸ್ ಹಣದಲ್ಲಿ ಸರ್ಕಾರ ಬೀಳಿಸುವ ಸ್ಥಿತಿ ಬಿಜೆಪಿಗೆ ಬಂದಿಲ್ಲ. ಕುಮಾರಸ್ವಾಮಿ ಈಗ ಮಾಡುತ್ತಿರುವ ಆರೋಪಕ್ಕೆ ಸತ್ಯಕ್ಕೆ ದೂರವಾಗಿದ್ದು. ಆಗ ಅವರೇ ಅಧಿಕಾರದಲ್ಲಿದ್ದರು ಇದನ್ನು ಮಟ್ಟ ಹಾಕಬಹುದಾಗಿತ್ತು. ಆಗ ಸುಮ್ಮನೆ ಇದ್ದು ಈಗ ಮಾತನಾಡಿದರೆ ಹೇಗೆ ಎಂದು ಪ್ರಶ್ನಿಸಿದರು.

ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ಬೆನ್ನಲ್ಲೇ ಮೈಸೂರಿನಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಡ್ರಗ್ ಹಾಗೂ ಗಾಂಜಾ ದಂಧೆ ಪ್ರಕರಣ ಕಂಡು ಬಂದಲ್ಲಿ ಪೊಲೀಸರೇ ಜವಾಬ್ದಾರರು. ಆ ವ್ಯಾಪ್ತಿಯ ಎಸಿಪಿ ಇನ್ಸ್ ಪೆಕ್ಟರ್ ಅವರೇ ನೇರ ಹೊಣೆ. ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಈ ಎಲ್ಲಾ ವಿಚಾರಗಳ ಚರ್ಚೆಗೆ ಸಭೆ ನಿಗದಿ ಮಾಡಲಾಗುವುದು ಎಂದರು.  ಇದನ್ನೂ ಓದಿ: ಮೈತ್ರಿ ಸರ್ಕಾರ ಬೀಳಿಸಲು ಬಿಜೆಪಿಯಿಂದ ಡ್ರಗ್ಸ್ ಮಾಫಿಯಾ ಹಣ ಬಳಕೆ- ಎಚ್‍ಡಿಕೆ

Comments

Leave a Reply

Your email address will not be published. Required fields are marked *