ಪಟಾಕಿ ಅವಾಂತರ – ಬೆಂಗಳೂರಲ್ಲಿ 7 ಮಂದಿಯ ಕಣ್ಣಿಗೆ ಹಾನಿ

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ನಿಷೇಧವಿದ್ದರೂ ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಪಟಾಕಿ ಹಚ್ಚಲು ಹೋಗಿ ಮೂರು ಮಕ್ಕಳ ಕಣ್ಣಿಗೆ ಗಾಯಗಳಾಗಿದ್ದು, ರಾತ್ರೋ ರಾತ್ರಿ ಬೆಂಗಳೂರಿನ ಬೇರೆ ಬೇರೆ ನಿವಾಸಿಗಳಾದ ಮೂವರು ಮಕ್ಕಳು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೂರು ಜನರು ಕೂಡ 10 ರಿಂದ 11 ವರ್ಷದ ಒಳಗಿನವರಾಗಿದ್ದಾರೆ.

ಸುಂಕದ ಕಟ್ಟೆ ಮೂಲದ 11 ವರ್ಷ ವಯಸ್ಸಿನ ಹುಡುಗ ಹೂವಿನ ಕೆಂಡ ಹಚ್ಚಲು ಹೋಗಿ ಕಣ್ಣಿಗೆ ಹಾನಿ ಮಾಡಿಕೊಂಡಿದ್ದಾನೆ. ಉಳಿದ ಇಬ್ಬರು ಪಟಾಕಿ ಹಚ್ಚಲು ಹೋಗಿ ಎಡಗಣ್ಣು ಮತ್ತು ಬಲಗಣ್ಣಿಗೆ ಹಾನಿ ಮಾಡಿಕೊಂಡಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಮೂವರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ಮಿಂಟೋ ಆಸ್ಪತ್ರೆಗೆ ಒಟ್ಟು 7 ಮಂದಿ ಮಕ್ಕಳು ಪಟಾಕಿ ಹಾನಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

Comments

Leave a Reply

Your email address will not be published. Required fields are marked *