ಪರಾರಿಯಾಗಿದ್ದ ನಟ, ಗಾಯಕ ದೀಪ್ ಸಿಧು ಕೊನೆಗೂ ಬಂಧನ

ನವದೆಹಲಿ: ರೈತರ ಟ್ರ್ಯಾಕ್ಟರ್  ರ‍್ಯಾಲಿ ವೇಳೆ ಹಿಂಸಾಚಾರ ಮತ್ತು ಕೆಂಪು ಕೋಟೆ ಮೇಲೆ ಧಾರ್ಮಿಕ ಧ್ವಜ ಹಾರಿಸಿದ ಸಂಬಂಧ ದೆಹಲಿಯ ವಿಶೇಷ ಪೊಲೀಸ್ ತಂಡ ನಟ, ಗಾಯಕ ದೀಪ್ ಸಿಧುನನ್ನು ಬಂಧಿಸಿದ್ದಾರೆ.

ಜನವರಿ 26 ರ ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ‍್ಯಾಲಿ  ವೇಳೆ ಕೆಂಪು ಕೋಟೆಯ ಮೇಲೆ ಖಾಸಗಿ ಧ್ವಜ ಹಾರಿಸಲು ಸಿಧು ಸಹಕರಿಸಿದ್ದನು. ಅಷ್ಟೇ ಅಲ್ಲದೇ ಅಲ್ಲಿಂದಲೇ ಫೇಸ್‍ಬುಕ್ ಲೈವ್ ಮಾಡಿದ್ದ. ಸಿಧುನಿಂದಲೇ ಪ್ರತಿಭಟನೆ ಹಾದಿ ತಪ್ಪಿತು ಎಂದು ರೈತ ಮುಖಂಡರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಧು ಬಂಧನವಾಗಿದೆ.

ಪ್ರಮುಖ ಆರೋಪಿಯಾಗಿರುವ ದೀಪ್ ಸಿಧು ತಲೆ ಮರೆಸಿಕೊಂಡಿದ್ದನು. ಈ ಹಿನ್ನೆಲೆ ಸಿಧು ಗಾಹೂ ಇತರೆ ಮೂವರು ಆರೋಪಿಗಳ ಕುರಿತಾಗಿ ಮಾಹಿತಿ ನೀಡಿದರೆ 1 ಲಕ್ಷ ರೂಪಾಯಿ ನೀಡುವುದಾಗಿ ಪೊಲೀಸರು ಬಹುಮಾನ ಪ್ರಕಟಿಸಿದ್ದರು. ಸಿಧುನ ಹುಡುಕಾಟದಲ್ಲಿರುವ ಪೊಲೀಸರಿಗೆ ಸಿಧು ತನ್ನ ಗೆಳತಿಯ ಫೋನ್ ಬಳಕೆ ಮಾಡುತ್ತಿದ್ದಾನೆ ಎಂದು ಸುಳಿವು ಸಿಕ್ಕಿದೆ. ಈ ಕುರಿತಾಗಿ ಮಾಹಿತಿ ಪಡೆದ ಪೊಲೀಸ್ ತಂಡ ಸಿಧು ಇದ್ದ ಸ್ಥಳವನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.

ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ರೈತ ಪ್ರತಿಭಟನೆಗೆ ನನ್ನನ್ನೇ ಸಮರ್ಪಿಸಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇನು. ಆದರೆ ಗಣರಾಜ್ಯೋತ್ಸವದ ಗಲಭೆ ನಂತರ ರೈತ ಸಂಘಟನೆಗಳು, ರೈತ ಮುಖಂಡರು ನನ್ನನ್ನು ಕಡೆಗಳಿಸುತ್ತಿದ್ದಾರೆ. ನಾನು ಪಂಜಾಬ್ ಜನರಿಗಾಗಿ ಧ್ವನಿ ಎತ್ತಿದೆ. ಕೆಂಪು ಕೋಟೆಯಲ್ಲಿ ಹಲವು ಗಾಯಕರು, ನಾಯಕರು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಜನರು ಇದ್ದರು. ಆದರೆ ನನ್ನನ್ನು ಮಾತ್ರ ಆರೋಪಿ ಸ್ಥಾನದಲ್ಲಿ ನೋಡುತ್ತಿದ್ದಾರೆ. ನಾನೀಗ ಬಿಹಾರದ ಕಾರ್ಮಿಕರೊಂದಿಗೆ ಇದ್ದೇನೆ ಎಂದು ಫೇಸ್‍ಬುಕ್ ವೀಡಿಯೋದಲ್ಲಿ ಕಣ್ಣೀರು ಹಾಕಿದ್ದ.

Comments

Leave a Reply

Your email address will not be published. Required fields are marked *