ಪಿಪಿಇ ಕಿಟ್ ಧರಿಸಿ ಕೋವಿಡ್ ವಾರ್ಡ್ ಗೆ ನಿರ್ಮಲಾನಂದನಾಥ ಶ್ರೀಗಳ ಭೇಟಿ

– ಸೋಂಕಿತರಿಗೆ ಧೈರ್ಯ ತುಂಬಿದ ಶ್ರೀಗಳು

ಮಂಡ್ಯ: ಕೋವಿಡ್ ವಾರ್ಡ್‍ನ್ನು ಪರಿಶೀಲನೆ ಮಾಡುವ ದೃಷ್ಟಿಯಿಂದ ಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪಿಪಿಇ ಕಿಟ್ ಧರಿಸಿ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಶ್ರೀ ಆದಿಚುಂಚನಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದ, ಶ್ರೀ ನಿರ್ಮಲಾನಂದನಾಥ ಸ್ಚಾಮೀಜಿ ಪಿಪಿಇ ಕಿಟ್ ಧರಿಸಿ ಕೊರೋನಾ ಸೋಂಕಿತರ ವಾರ್ಡ್‍ಗೆ ತೆರಳಿದರು. ಅಲ್ಲಿನ ಮೂಲಭೂತ ಸೌಕರ್ಯ ಮತ್ತು ಚಿಕಿತ್ಸೆಯ ಕುರಿತು ಪರಿಶೀಲನೆ ನಡೆಸಿದರು. ನಂತರ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಬಳಿ ಬಂದು ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸೆ ಹಾಗೂ ಆಹಾರದ ಕುರಿತು ವಿಚಾರಿಸಿದರು.

ಸೋಂಕಿತರಿಗೆ ಕೊರೊನಾ ವಿರುದ್ಧ ಹೋರಾಟ ಮಾಡುವ ಅನಿವಾರ್ಯ ಸ್ಥಿತಿ ನಮಗೆ ಎದುರಾಗಿದೆ. ಅದರ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ನಾವೆಲ್ಲಾ ಇದ್ದೀವಿ, ನೀವು ಧೃತಿಗೆಡುವ ಅವಶ್ಯಕತೆ ಇಲ್ಲ ಎಂದು ಧೈರ್ಯ- ಸ್ಥೈರ್ಯ ತುಂಬಿ ಶ್ರೀಘ್ರ ಗುಣಮುಖರಾಗಿ ಎಂದು ಆಶೀರ್ವಾದ ಮಾಡಿದರು. ಇದೇ ವೇಳೆ ಸೋಂಕಿತರಿಗೆ ಹಣ್ಣು-ಹಂಪಲನ್ನು ನೀಡಿದರು.

Comments

Leave a Reply

Your email address will not be published. Required fields are marked *