ಪ್ರವಾಹದಿಂದ ನೀರು ವ್ಯರ್ಥವಾಗುವುದನ್ನು ತಡೆದು, 35 ಕೆರೆ ತುಂಬಿಸಲು ಯಾದಗಿರಿ ಜಿಲ್ಲಾಡಳಿತ ಪ್ಲಾನ್

– ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಿದ್ಧತೆ

ಯಾದಗಿರಿ: ಜಿಲ್ಲೆಯಲ್ಲಿ ಉತ್ತಮ ಮುಂಗಾರು ಮಳೆಯಾಗುತ್ತಿದೆ, ಮತ್ತೊಂದೆಡೆ ಬಸವಸಾಗರ ಜಲಾಶಯದಿಂದ ಕೃಷ್ಣ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ಇನ್ನೊಂದೆಡೆ ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭೀಮಾನದಿಗೆ ಯಾವುದೇ ಕ್ಷಣದಲ್ಲಿ ನೀರು ಬಿಡುವ ಸಾಧ್ಯತೆಯಿದೆ. ಕಳೆದ ಬಾರಿ ಎರಡು ನದಿಗಳು ಸೃಷ್ಟಿಸಿದ ಪ್ರವಾಹದಿಂದ ಬುದ್ಧಿ ಕಲಿತಿರುವ ಜಿಲ್ಲಾಡಳಿತ, ಈಗ ಪ್ರವಾಹಕ್ಕೆ ಸೆಡ್ಡು ಹೊಡೆಯಲು ಮುಂದಾಗಿದೆ.

ಈ ಬಾರಿ ಪ್ರವಾಹ ಉಂಟಾದರೆ ಅದೇ ನೀರಿನಿಂದ ಜಿಲ್ಲೆಯಲ್ಲಿನ 35 ಕೆರೆಗಳನ್ನು ತುಂಬಿಸುವ ಸಾಹಸಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಇದಕ್ಕಾಗಿ ಗುರುಸುಣಗಿ ಹತ್ತಿರದ ಬ್ರಿಡ್ಜ್ ಕಂ ಬ್ಯಾರೇಜ್ ಹತ್ತಿರ ವಿಶೇಷ ಯೋಜನೆ ನಿರ್ಮಾಣಗೊಳುತ್ತಿದೆ.

ಸದ್ಯ ಕೆರೆ ತುಂಬಿಸಲು ದಡದಲ್ಲಿ ಕಾಮಗಾರಿ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಅಕ್ಟೋಬರ್ ತಿಂಗಳೊಳಗಾಗಿ ಯೋಜನೆಯ ಕಾಮಗಾರಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

Comments

Leave a Reply

Your email address will not be published. Required fields are marked *