ಪ್ರವಾಹ ನಿಯಂತ್ರಣ ಕಾರ್ಯಗಳಿಗೆ 5 ಕೋಟಿ ರೂ. ಬಿಡುಗಡೆ – ಧಾರವಾಡ ಡಿಸಿ

ಧಾರವಾಡ: ಅತಿವೃಷ್ಟಿಯಿಂದ ಧಾರವಾಡ ಜಿಲ್ಲೆಯ ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳಗಳು ಉಕ್ಕಿ ಹರಿದು ನೆರೆಹಾವಳಿ ಎದುರಿಸುವ ನವಲಗುಂದ ತಾಲೂಕಿನ ವಿವಿಧ ಹಳ್ಳಿಗಳು ಮತ್ತು ನಾಲೆಗಳ ಪ್ರದೇಶಗಳಿಗೆ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ್ ಭೇಟಿ ಪರಿಶೀಲಿಸಿದರು.

ಯಮನೂರು ಗ್ರಾಮದ ಬಳಿ ಬೆಣ್ಣೆಹಳ್ಳದಿಂದ ಉಂಟಾಗುವ ಪರಿಸ್ಥಿತಿ, ಅಮರಗೋಳ ಗ್ರಾಮದ ಬಳಿಯ ನರಗುಂದ ಸೇತುವೆ, ಗೊಬ್ಬರಗುಂಪಿ, ಅಳಗವಾಡಿ, ಹೆಬ್ಬಾಳ, ಜಾವೂರ, ಹನಸಿ, ಶಿರಕೋಳ ಗ್ರಾಮಗಳ ಸುತ್ತಮುತ್ತಲಿನ ಕೃಷಿ ಭೂಮಿ ಮತ್ತು ಹಳ್ಳ, ಕೊಳ್ಳಗಳನ್ನು ಜಿಲ್ಲಾಧಿಕಾರಿ ವೀಕ್ಷಿಸಿದರು. ಹನಸಿ – ಶಿರಕೋಳ ಮಧ್ಯೆ ತುಪ್ಪರಿಹಳ್ಳದ ಹರಿವಿನಿಂದ ಹಾನಿಗೀಡಾಗಿರುವ ರಸ್ತೆಯನ್ನು ನೋಡಿ ದುರಸ್ತಿಗೆ ಅನುದಾನ ಲಭ್ಯವಿದ್ದು ಕೂಡಲೇ ಒದಗಿಸುವದಾಗಿ ಹೇಳಿದರು.

ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯಗಳಿಗೆ 5 ಕೋಟಿ ರೂ.ಬಿಡುಗಡೆಯಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸೂಚನೆಗಳನ್ನು ನೀಡಲಾಗಿದೆ. ಅತಿವೃಷ್ಟಿ ಬಾಧಿತವಾಗುವ ಜಿಲ್ಲೆಯ 83 ಗ್ರಾಮಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರವಾಹ ಎದುರಾದರೆ ಜನರ ಸ್ಥಳಾಂತರಕ್ಕೆ ಪರಿಹಾರ ಕೇಂದ್ರಗಳನ್ನು ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Comments

Leave a Reply

Your email address will not be published. Required fields are marked *