ಪ್ರೀತಿಸಿ ವಿವಾಹದ ಪತಿ ಶೀಲ ಶಂಕಿಸಿದ- ಬೇಸತ್ತ ಪತ್ನಿ ನೇಣಿಗೆ ಶರಣು

ತುಮಕೂರು: ಪತಿ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ನಗರದ ಉಪ್ಪಾರಹಳ್ಳಿ ನಿವಾಸಿ ಹೀನಾಬಾನು(22) ಮೃತ ದುರ್ದೈವಿ. ಪತಿಯ ಅನುಮಾನಕ್ಕೆ ಬೇಸತ್ತು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಒಂದು ವರ್ಷದ ಹಿಂದಷ್ಟೇ ಸಿಫತ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಪತಿ ಯಾವಾಗಲೂ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪತ್ನಿ ಶೀಲದ ಬಗ್ಗೆ ಅನುಮಾನ ವ್ಯಕ್ತ ಪಡಿಸಿದ್ದರಿಂದ ಬೇಸತ್ತು ಮಹಿಳೆ ನೇಣು ಬಿಗಿದುಕೊಂಡಿದ್ದು, ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Comments

Leave a Reply

Your email address will not be published. Required fields are marked *