ಸ್ನೇಹಿತನ ಜೊತೆ ಪತ್ನಿಯ ಸಂಬಂಧ- ಬೆಲ್ಟ್‌ನಿಂ ದ ಕತ್ತು ಹಿಸುಕಿ ಕೊಲೆ

– ಮೃತದೇಹವನ್ನ ಬೆಡ್‍ಶೀಟ್‍ನಲ್ಲಿ ಸುತ್ತಿ ಮಂಚದ ಕೆಳಗಿಟ್ರು

ಚೆನ್ನೈ: ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಕೊಲೆ ಮಾಡಿದ್ದು, 10 ತಿಂಗಳ ನಂತರ ಆರೋಪಿಗಳು ಸಿಕ್ಕಿ ಬಿದ್ದಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.

ಶ್ರೀಧರನ್ ಕೊಲೆಯಾದ ಪತಿ. ಆರೋಪಿಗಳನ್ನು ಎಸ್.ಸುಧಾ ಮತ್ತು ಶಿವರಾಜ್ ಎಂದು ಗುರುತಿಸಲಾಗಿದೆ. ಆರೋಪಿ ಸುಧಾ ಸುಳ್ಳಿನ ಕಥೆ ಹೇಳಿ ಬಂಧನದಿಂದ ತಪ್ಪಿಸಿಕೊಳ್ಳುವ ಪ್ರಯತ್ನವನ್ನು ಮಾಡಿದ್ದಳು. ನನ್ನ ಕುಟುಂಬ ಮತ್ತು ಸ್ನೇಹಿತರಿಂದ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದ ಕಾರಣ ಪತಿ ಪರಾರಿಯಾಗಿದ್ದಾನೆ ಎಂದು ಸುಧಾ ಪೊಲೀಸರಿಗೆ ಹೇಳಿದ್ದಳು. ಕೊನೆಗೆ ಪೊಲೀಸರು ತನಿಖೆ ಕೈಗೊಂಡಾಗ ಸುಧಾ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವ ಸತ್ಯ ಬಹಿರಂಗವಾಗಿದೆ. ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಪೊಲೀಸರು ಗೋಡಂಬಿ ತೋಟದಲ್ಲಿ ಸಂಪೂರ್ಣವಾಗಿ ಸುಟ್ಟ ಮೃತದೇಹವನ್ನು ವಶಪಡಿಸಿಕೊಂಡಿದ್ದರು. ಈ ಕುರಿತು ಪೊಲೀಸರು  ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ತನಿಖೆ ವೇಳೆ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವುದು ತಿಳಿದುಬಂದಿದೆ.

ಶ್ರೀಧರನ್ ಕಾಲೇಜ್‍ವೊಂದರಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಅದೇ ಕಾಲೇಜಿನಲ್ಲಿ ಆರೋಪಿ ಶಿವರಾಜ್ ಕೂಡ ಕೆಲಸ ಮಾಡುತ್ತಿದ್ದನು. ಹೀಗಾಗಿ ಇವರಿಬ್ಬರಿಗೂ ಪರಿಚಯವಾಗಿತ್ತು. ಇಬ್ಬರ ಮಧ್ಯೆ ಸ್ನೇಹ ಬಲವಾಗುತ್ತಿದ್ದಂತೆ ಶಿವರಾಜ್, ಶ್ರೀಧರನ್ ಮನೆಗೆ ಬರಲು ಪ್ರಾರಂಭಿಸಿದನು. ದಿನ ಕಳೆದಂತೆ ಆರೋಪಿ, ಶ್ರೀಧರನ್ ಪತ್ನಿ ಸುಧಾ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ದಿನ ಸುಧಾ ಮತ್ತು ಶಿವರಾಜ್ ಇಬ್ಬರು ಅನೈತಿಕ ಸಂಬಂಧ ಹೊಂದಿದ್ದನ್ನು ಮೃತ ಶ್ರೀಧರನ್ ನೋಡಿದ್ದಾನೆ. ಇದರಿಂದ ಕೋಪಗೊಂಡ ಶ್ರೀಧರನ್ ಇಬ್ಬರು ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಶಿವರಾಜ್ ಮತ್ತು ಸುಧಾ ಇಬ್ಬರು ಸೇರಿಕೊಂಡು ಶ್ರೀಧರನ್‍ನನ್ನು ಬೆಲ್ಟ್ ಮೂಲಕ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ತನಿಖಾಧಿಕಾರಿ ಹೇಳಿದರು.

ಶ್ರೀಧರ್ ಮೃತದೇಹವನ್ನು ಬೆಡ್‍ಶೀಟ್‍ನಲ್ಲಿ ಸುತ್ತಿ ಮಂಚದ ಕೆಳಗೆ ಬಚ್ಚಿಟ್ಟಿದ್ದರು. ರಾತ್ರಿಯಾಗುತ್ತಿದ್ದಂತೆ ಶಿವರಾಜ್ ಶವವನ್ನು ಕಾರಿನಲ್ಲಿ ಗೋಡಂಬಿ ತೋಟಕ್ಕೆ ತೆಗೆದುಕೊಂಡು ಹೋಗಿ ಎಸೆದಿದ್ದಾರೆ. ಅಲ್ಲದೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಸದ್ಯಕ್ಕೆ ಈ ಕುರಿತು ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Comments

Leave a Reply

Your email address will not be published. Required fields are marked *