ಫುಟ್‍ಪಾತ್‍ನಲ್ಲಿ ಮಲಗಿದ್ದ ಭಿಕ್ಷುಕಿ ಮೇಲೆ ಅತ್ಯಾಚಾರ, ಕೊಲೆ

ಮಂಡ್ಯ: ಮಹಾಮಾರಿ ಕೊರೊನಾ ಆತಂಕದಲ್ಲಿ ಜನ ಬೇಸತ್ತಿದ್ದರೆ, ಇತ್ತ ಸಕ್ಕರೆ ನಾಡು ಮಂಡ್ಯದಲ್ಲಿ ಸಾರ್ವಜನಿಕರು ತಲೆತಗ್ಗಿಸವಂತಹ ಕೃತ್ಯವೊಂದು ನಡೆದಿದೆ

ಹೌದು. ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಭಿಕ್ಷುಕಿಯ ಮೇಲೆ ಅತ್ಯಾಚಾರವೆಸಗಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ನಗರದಲ್ಲಿ ನಡೆದಿದೆ.

ಮಂಡ್ಯದ ಬಾಟ ಶೋ ರೂಂ ಎದುರಿನ ಫುಟ್‍ಪಾತ್‍ನಲ್ಲಿ ಮಲಗಿದ್ದ ಅಪರಿಚಿತ ಭಿಕ್ಷುಕಿಯ ಮೇಲೆ ಕಳೆದ ರಾತ್ರಿ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ನಂತರ ಅದೇ ಸ್ಥಳದಲ್ಲಿ ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಪರಾರಿಯಾಗಿದ್ದಾರೆ.

ಇಂದು ಬೆಳಗ್ಗೆ ವಿಷಯ ತಿಳಿದ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಮಂಡ್ಯದ ಪೂರ್ವ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *