‘ಫೈರ್’ ಸಂಪತ್ ‘ರಾಜ್’ ಬಂಧನವಾಗಿದ್ದೇಗೆ?

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಎಸ್ಕೇಪ್ ಆಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇಂದು ಪೊಲೀಸರು ಸಂಪತ್ ರಾಜ್ ಗೆಳೆಯ ಕಾಂಟ್ರಾಕ್ಟರ್ ರಿಯಾಜುದ್ದೀನ್ ಎಂಬಾತನನ್ನ ಬಂಧಿಸಿದ್ದರು. ರಿಯಾಜುದ್ದೀನ್ ನೀಡಿದ ಮಾಹಿತಿ ಆಧಾರದ ಮೇಲೆ ಸಂಪತ್ ರಾಜ್ ಬಂಧನವಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸಂಪತ್ ರಾಜ್ ಗುಣಮುಖವಾದ ಬಳಿಕ ಎಸ್ಪೇಕ್ ಆಗಿ ನಾಗರಹೊಳೆಯ ಫಾರ್ಮ್ ನಲ್ಲಿ ಆಶ್ರಯ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ರಿಯಾಜುದ್ದೀನ್ ತನ್ನ ಕಾರಿನಲ್ಲಿಯೇ ಸಂಪತ್ ರಾಜ್ ನನ್ನು ಕರೆದುಕೊಂಡು ತನ್ನ ಆಪ್ತರ ಬಳಿ ಬಿಟ್ಟಿದ್ದನು. ರಿಯಾಜುದ್ದೀನ್ ಶಿಷ್ಯರ ಚಲನವಲನ ಮೇಲೆಯೂ ಸಿಸಿಬಿ ತಂಡ ಕಣ್ಣಿಟ್ಟಿತ್ತು. ರಿಯಾಜುದ್ದೀನ್ ಶಿಷ್ಯರು ಸಂಪತ್ ರಾಜ್ ಜೊತೆ ನೇರ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಾಕಿದ ವೇಳೆ ಸಂಪತ್ ರಾಜ್ ಕೂಗಳತೆ ದೂರದಲ್ಲಿಯೇ ಇದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಯ ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್ ರಾಜ್ ಸಿಸಿಬಿ ವಿಚಾರಣೆಗ ಎದುರಿಸಿದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರಿಂದ ಬಂಧನ ವಿಳಂಬವಾಗಿತ್ತು.

Comments

Leave a Reply

Your email address will not be published. Required fields are marked *