ಫ್ರಾನ್ಸ್ ನಲ್ಲಿ ರಫೇಲ್ ಡೀಲ್ ತನಿಖೆ – ಕಳ್ಳನ ದಾಡಿ ಅಂದ್ರು ರಾಹುಲ್ ಗಾಂಧಿ

ನವದೆಹಲಿ: ರಫೇಲ್ ಫೈಟರ್ ಪ್ಲೇನ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ರಫೇಲ್ ಡೀಲ್ ಸಂಬಂಧ ಫ್ರಾನ್ಸ್ ನಲ್ಲಿ ತನಿಖೆಗೆ ಆದೇಶಿಸಲಾಗಿದೆ. ಈ ಬೆನ್ನಲ್ಲೇ ದೇಶದಲ್ಲಿ ರಾಜಕೀಯದಲ್ಲಿ ಹಲ್-ಚಲ್ ಉಂಟಾಗಿದೆ.

ಫ್ರಾನ್ಸ್ ನಲ್ಲಿ ತನಿಖೆಗೆ ಆದೇಶವಾಗುತ್ತಲೇ, ಭಾರತದಲ್ಲಿಯೂ ರಫೇಲ್ ಡೀಲ್ ಕುರಿತು ಜಂಟಿ ಸಂಸದೀಯ ಸಮಿತಿ ರಚಿಸಿ ತನಿಖೆ ಮಾಡಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ಇತ್ತ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ, ಕಳ್ಳನ ದಾಡಿ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ರಣ್‍ದೀಪ್ ಸುರ್ಜೇವಾಲಾ, ಫ್ರಾನ್ಸ್ ನಲ್ಲಿ ರಫೇಲ್ ಡೀಲ್ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿರೋದನ್ನು ಗಮನಿಸಿದ್ರೆ ರಾಹುಲ್ ಗಾಂಧಿ ಆರೋಪಗಳು ಸತ್ಯ ಅನ್ನೋದು ಗೊತ್ತಾಗುತ್ತೆ. ಫ್ರಾನ್ಸ್ ಸರ್ಕಾರ ದ ಹಾಗೆ ನಮ್ಮಲ್ಲಿಯ ಜಂಟಿ ಸಂಸದೀಯ ಸಮಿತಿ ನೇತೃತ್ವದಲ್ಲಿ ರಫೇಲ್ ಡೀಲ್ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಫೇಲ್ ಹಗರಣದ ಭೀಕರ ಸತ್ಯ:
ಇದೊಂದು ದೊಡ್ಡ ಭ್ರಷ್ಟಾಚಾರ, ದೇಶದ್ರೋಹ ಮತ್ತು ದೇಶದ ಬೊಕ್ಕಸದ ನಷ್ಟ ರಫೇಲ್ ಹಗರಣದಲ್ಲಿ ಅಡಗಿದೆ. ರಫೇಲ್ ಹಗರಣದ ಭೀಕರ ಸತ್ಯ ಕೊನೆಗೂ ಅನಾವರಣಗೊಂಡಿದೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಸರಿ ಎಂಬುವುದು ಸಾಬೀತಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸುರ್ಜೇವಾಲಾ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಭಾರತದ ಸೈನ್ಯ ಸೇರಿದ 5ನೇ ಬ್ಯಾಚ್ ರಫೇಲ್ ಯುದ್ಧ ವಿಮಾನ

ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಉತ್ತರ:
ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ಕಾಂಗ್ರೆಸ್ ಸುಳ್ಳು ಕಥೆಗಳಿಗೆ ಪರ್ಯಾಯ ಪದ. ಇಂದು ಮತ್ತೊಮ್ಮೆ ರಫೇಲ್ ಖರೀದಿ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ. ಒಂದು ದೇಶದ ಎನ್‍ಜಿಓ ಯಾವುದೇ ವಿಷಯದ ಬಗ್ಗೆ ಆರೋಪಿಸಿದ್ದು, ಅಲ್ಲಿ ತನಿಖೆಗೆ ಆದೇಶ ನೀಡಲಾಗಿದೆ. ಆದ್ರೆ ಇದನ್ನು ಭ್ರಷ್ಟಾಚಾರ ರೂಪದಲ್ಲಿ ನೋಡಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: 60 ಸಾವಿರ ಕೋಟಿ ರಫೇಲ್ ಡೀಲ್‍ನಲ್ಲಿ ಕೋಟಿ ಕೋಟಿ ಗಿಫ್ಟ್ ಸಿಕ್ಕಿದ್ಯಾರಿಗೆ – ಕಾಂಗ್ರೆಸ್ ಪ್ರಶ್ನೆ

Comments

Leave a Reply

Your email address will not be published. Required fields are marked *