ಬಿಎಸ್‍ಪಿ ಕಾರ್ಯಕರ್ತರ ಮೇಲೆ ಹಲ್ಲೆ – ಎನ್ ಮಹೇಶ್ ಬೆಂಬಲಿಗರ ಬಂಧನ

ಚಾಮರಾಜನಗರ: ಬಿಎಸ್‍ಪಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದ ಕೊಳ್ಳೇಗಾಲದ ಬಿಎಸ್‍ಪಿ ಉಚ್ಛಾಟಿತ ಶಾಸಕ ಎನ್.ಮಹೇಶ್‍ರವರ ಇಬ್ಬರು ಬೆಂಬಲಿಗರನ್ನು ಬಂಧಿಸಲಾಗಿದೆ.

ನಗರಸಭೆ ಸದಸ್ಯ ನಾಸೀರ್ ಷರೀಫ್ ಮತ್ತು ಜಕಾವುಲ್ಲಾ ಬಂಧಿತ ವ್ಯಕ್ತಿಗಳು. ಕಳೆದ ಎರಡು ದಿನದ ಹಿಂದೆ ಶಾಸಕ ಎನ್ ಮಹೇಶ್ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ್ದ ಬಿಎಸ್‍ಪಿ ಕಾರ್ಯಕರ್ತರು ಶಾಸಕ ಮಹೇಶ್ ಬಿಜೆಪಿಗೆ ಸಹಕರಿಸುತ್ತಿದ್ದಾರೆಂದು ಆರೋಪಿಸಿ ಬಿಜೆಪಿಗೆ ಮಾರಾಟವಾಗಿರುವ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಇದರಿಂದ ಕುಪಿತಗೊಂಡ ಶಾಸಕರ ಬೆಂಬಲಿಗರಾದ ನಾಸೀರ್ ಷರೀಫ್ ಹಾಗೂ ಜಕಾವುಲ್ಲಾ ಬಿಎಸ್‍ಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಇವರಿಬ್ಬರ ವಿರುದ್ಧ ಹಲ್ಲೆ ಹಾಗೂ ಜಾತಿನಿಂದನೆ ಪ್ರಕರಣ ಸಹ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಇಂದು ಕೊಳ್ಳೇಗಾಲ ಪೊಲೀಸರು ಬಂಧಿಸಿ, ಜೈಲಿಗೆ ಕಳಿಸಿದ್ದಾರೆ.

Comments

Leave a Reply

Your email address will not be published. Required fields are marked *