ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಆಯ್ಕೆ

– ಪ್ರಧಾನ ಕಾರ್ಯದರ್ಶಿಯಾಗಿ ಸಿ.ಟಿ.ರವಿ ನೇಮಕ
– ಪದಾಧಿಕಾರಿಗಳ ಪಟ್ಟಿ ಪ್ರಕಟಿಸಿದ ಜೆಪಿ ನಡ್ಡಾ

ನವದೆಹಲಿ: ಬಿಜೆಪಿ ಹೈ ಕಮಾಂಡ್‍ನಿಂದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಚಿವ ಸಿ.ಟಿ.ರವಿ ಅವರನ್ನು ನೇಮಿಸಲಾಗಿದೆ.

ಜೆ.ಪಿ.ನಡ್ಡಾ ಅವರು ತಂಡದಲ್ಲಿ ರಾಜ್ಯದ ನಾಲ್ವರು ಬಿಜೆಪಿ ನಾಯಕರಿಗೆ ಸ್ಥಾನ ಲಭಿಸಿದ್ದು, ತೇಜಸ್ವಿ ಸೂರ್ಯ ಹಾಗೂ ಸಿ.ಟಿ.ರವಿ ಅವರಿಗೆ ರಾಷ್ಟ್ರ ಮಟ್ಟದಲ್ಲಿ ಸ್ಥಾನಮಾನ ನೀಡಿದ್ದಾರೆ. ಈ ಮೊದಲೇ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಬಿ.ಎಲ್.ಸಂತೋಷ್ ಅವರನ್ನು ಸಹ ಅದೇ ಸ್ಥಾನದಲ್ಲಿ ಮುಂದುವರಿಸಿದ್ದಾರೆ. ಸಚಿವ ಸಿ.ಟಿ.ರವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಯಾಗಿದ್ದರೆ, ಯುವ ಮೊರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕವಾಗಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ಪದಾಧಿಕಾರಿಗಳನ್ನು ಬದಲಾಯಿಸುವ ಮೂಲಕ ಪಕ್ಷದ ಸಂಘಟನೆಗೆ ಬಲ ನೀಡಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ,ನಡ್ಡಾ ಅವರಿಂದ ಘೋಷಣೆ ಹೊರ ಬಿದ್ದಿದೆ. ಈ ಮೂಲಕ ರಾಜ್ಯದ ಯುವ ನಾಯಕರು ಹೈಕಮಾಂಡ್ ಮಟ್ಟದಲ್ಲಿ ಪ್ರಮುಖ ಸ್ಥಾನ ಪಡೆದಂತಾಗಿದೆ. ಹೈ ಕಮಾಂಡ್ ಹೆಸರು ಘೋಷಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಸಂತಸ ಮನೆ ಮಾಡಿದೆ. ಹಲವು ನಾಯಕರು ಶುಭ ಕೋರುತ್ತಿದ್ದಾರೆ.

Comments

Leave a Reply

Your email address will not be published. Required fields are marked *