ಬಿಜೆಪಿ ಸರ್ಕಾರ ನನ್ನೊಂದಿಗೆ ಇದೆಯಾ? ಕುಲದೀಪ್ ಸೆನ್‍ಗರ್ ಜೊತೆ?: ಉನ್ನಾವೋ ಪ್ರಕರಣದ ಸಂತ್ರಸ್ತೆ

ಲಕ್ನೋ: ಬಿಜೆಪಿ ಸರ್ಕಾರ ನನ್ನೊಂದಿಗೆ ಇದೆಯಾ ಅಥವಾ ಅಪರಾಧಿ ಕುಲದೀಪ್ ಸೆನ್‍ಗರ್ ಜೊತೆಗಿದೆಯಾ ಎಂದು ಉನ್ನಾವೋ ಪ್ರಕರಣದ ಸಂತ್ರಸ್ತೆ ಪ್ರಶ್ನೆ ಮಾಡಿದ್ದಾರೆ.

ಉನ್ನಾವೋ ಜಿಲ್ಲಾ ಪಂಚಾಯ್ತಿಯ ಅಧ್ಯಕ್ಷ ಚುನಾವಣೆಗೆ ಅರುಣ್ ಸಿಂಗ್ ಬಿಜೆಪಿ ಅಭ್ಯರ್ಥಿ. ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಕುಲದೀಪ್ ಸೆನ್‍ಗರ್ ಆಪ್ತ. ಹೀಗಾಗಿ ಅರುಣ್ ಸಿಂಗ್‍ಗೆ ಟಿಕೆಟ್ ನೀಡಿರುವುದನ್ನ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ವಿರೋಧಿಸಿದ್ದಾರೆ. ಈ ಸಂಬಂಧ ವೀಡಿಯೋ ಮೂಲಕ ತಮ್ಮ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ವೀಡಿಯೋ ಹೇಳಿಕೆ: ಮಾನ್ಯ ರಾಷ್ಟ್ರಪತಿಗಳೇ, ಪ್ರಧಾನಿಗಳು ಮತ್ತು ಸಿಎಂ ಯೋಗಿ ಆದಿತ್ಯನಾಥ್ ನೀವು ನನ್ನ ಪಶ್ನೆಗೆ ಉತ್ತರ ನೀಡಬೇಕು. ಒಂದು ವೇಳೆ ಅರುಣ್ ಸಿಂಗ್ ಚುನಾವಣೆಯಲ್ಲಿ ಗೆದ್ದರೆ, ನನ್ನ ಜೀವಕ್ಕಿರುವ ಅಪಾಯ ಹೆಚ್ಚಾಗಲಿದೆ. ಕೂಡಲೇ ಸರ್ಕಾರ ಮತ್ತು ಪಕ್ಷ ಅರುಣ್ ಸಿಂಗ್‍ಗೆ ನೀಡಿರುವ ಟಿಕೆಟ್ ಹಿಂಪಡೆದುಕೊಳ್ಳಬೇಕು. ಕಳಂಕರಹಿತರಿಗೆ ಟಿಕೆಟ್ ನೀಡಬೇಕು. ನನ್ನ ಚಿಕಪ್ಪ ಪೊಲೀಸ್ ಬಂಧನದಲ್ಲಿದ್ದು, ಪೆರೋಲ್ ಗೆ ಅರ್ಜಿ ಸಲ್ಲಿಸಿದ್ದಾರೆ. ಆದ್ರೆ ಕುಲ್‍ದೀಪ್ ಪ್ರಭಾವದಿಂದ ಪೆರೋಲ್ ಸಿಗುತ್ತಿಲ್ಲ ಎಂದು ಸಂತ್ರಸ್ತೆ ಆರೋಪ ಮಾಡಿದ್ದಾರೆ.

ಸಂತ್ರಸ್ತೆ ಹೇಳಿಕೆ ಬಳಿಕ ಬಿಜೆಪಿ ನೀಡಿದ ಟಿಕೆಟ್ ಹಿಂಪಡೆದುಕೊಂಡಿದೆ. ಅರುಣ್ ಸಿಂಗ್ ನಮ್ಮ ಅಭ್ಯರ್ಥಿ ಅಲ್ಲ, ಶಕುನ್ ಸಿಂಗ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜ್ ಕಿಶೋರ್ ರಾವತ್ ಹೇಳಿದ್ದಾರೆ. ಇದನ್ನೂ ಓದಿ: ಉನ್ನಾವೋ ಕೇಸ್ – ಅತ್ಯಾಚಾರಿ ಶಾಸಕ ಸೆಂಗಾರ್‌ಗೆ ಜೀವಾವಧಿ ಜೈಲು ಶಿಕ್ಷೆ

Comments

Leave a Reply

Your email address will not be published. Required fields are marked *