ಬೆಂಗ್ಳೂರು ಲಾಕ್- ಶಿವಮೊಗ್ಗ ಗಡಿಯಲ್ಲಿ ಚೆಕ್‍ಪೋಸ್ಟ್ ನಿರ್ಮಾಣ

ಶಿವಮೊಗ್ಗ: ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಳೆ ರಾತ್ರಿಯಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ಜಿಲ್ಲೆಯ ಜನ ಮರಳಿ ಬರಬಹುದು ಎಂಬ ಮಾಹಿತಿ ಮೇರೆಗೆ ಪರಿಶೀಲನೆಗಾಗಿ ಗಡಿಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ.

ಜಿಲ್ಲೆಯ ಭದ್ರಾವತಿಯ ಬಿ.ಹೆಚ್.ರಸ್ತೆಯ ಕೆರೆಹಳ್ಳಿಯ ಬಳಿ ಒಂದು ಹಾಗೂ ಭದ್ರಾವತಿ ತಾಲೂಕು ಹಂಚಿನ ಸಿದ್ದಾಪುರ ಗ್ರಾಮದ ಭದ್ರಾ ಕಾಲುವೆಯ ಬಳಿ ಮತ್ತೊಂದು ಚೆಕ್‍ಪೋಸ್ಟ್ ನಿರ್ಮಿಸಲಾಗಿದೆ. ಬೆಂಗಳೂರಿನಿಂದ ಬರುವವರನ್ನು ಪರಿಶೀಲಿಸಿ, ಚೆಕ್ ಮಾಡಿ ಜಿಲ್ಲೆಯೊಳಗೆ ಬಿಡುಗ ಕ್ರಮ ಕೈಗೊಳ್ಳಲಾಗಿದೆ.

ಭದ್ರಾವತಿ ಗಡಿಯ ಕೆರೆಹಳ್ಳಿ ಚೆಕ್‍ಪೋಸ್ಟ್ ಬಳಿ ಬೆಂಗಳೂರಿನಿಂದ ಬರುವ ಪ್ರಯಾಣಿಕರು ಹಾಗೂ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಚಿತ್ರದುರ್ಗ ಕಡೆಯಿಂದ ಬರುವವರ ತಪಾಸಣೆಗಾಗಿ ಚೆಕ್‍ಪೋಸ್ಟ್ ರಚಿಸಲಾಗಿದೆ. ತಪಾಸಣೆ ಬಳಿಕ ಶಿವಮೊಗ್ಗ ಜಿಲ್ಲೆಯೊಳಗೆ ಪ್ರವೇಶಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *